ಬ್ರೇಕಿಂಗ್ ನ್ಯೂಸ್
30-08-24 03:31 pm HK News Desk ಕ್ರೈಂ
ಬೆಳಗಾವಿ, ಆ 29: ಕಿರಾತಕರ ಗ್ಯಾಂಗ್ವೊಂದು ಸಿನಿಮೀಯ ರೀತಿಯಲ್ಲಿ ರಾತೋರಾತ್ರಿ ಪಟ್ಟಣ ಪಂಚಾಯತ್ ಸದಸ್ಯನ ಅಪಹರಣ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚೌಕಿಮಠ ಬಳಿ ಘಟನೆ ನಡೆದಿದೆ.
ಕಿತ್ತೂರು ಪಟ್ಟಣ ಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಆಗಿತ್ತು. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಎಂಬಾತನನ್ನು ಕಾಂಗ್ರೆಸ್ ಸದಸ್ಯರು ಕಿಡ್ನ್ಯಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಸಂಬಂಧ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ ಕಡೆಮನಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಮೂವರು ಸೇರಿ ನನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ನಾಗರಾಜ್ ತಂದೆ ಬಸವರಾಜ್ ಅಸುಂಡಿ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು.
ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿಯ 9 ಹಾಗೂ ಕಾಂಗ್ರೇಸ್ ನ 5 ಪಕ್ಷೇತರ 4 ಸದಸ್ಯರ ಬಲ ಹೊಂದಿದೆ. ಈ ವೇಳೆ ಬಿಜೆಪಿ ಸದಸ್ಯನ ಕಿಡ್ನ್ಯಾಪ್ ಮಾಡಿ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಸ್ಥಾನಕ್ಕೇರುವ ಪ್ಲಾನ್ ಮಾಡಿದ್ದರು. ಸದ್ಯ ನಾಗರಾಜ್ನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಬೆಳಗಾವಿ ಪೊಲೀಸರು ಕಿಡ್ನ್ಯಾಪ್ ಮಾಡಿದವರಿಗೆ ತಲಾಶ್ ನಡೆಸಲು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಅವರು ಮೂರು ತಂಡಗಳ ರಚನೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ಬಿಜೆಪಿ ಸದಸ್ಯರೊಬ್ಬರ ಅಪಹರಣ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A BJP member of the Town Panchayat, Nagaraj Asundi, was kidnapped from the town on Thursday night in the wake of election for the posts of president and vice president to be held on September 3.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm