ಬ್ರೇಕಿಂಗ್ ನ್ಯೂಸ್
30-08-24 09:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 30: ನಗರದ ಲಾಲ್ ಬಾಗ್ ಬಳಿಯ ಬಾರ್ ಒಂದರಲ್ಲಿ ಇಬ್ಬರು ಸ್ನೇಹಿತರ ಜೊತೆಗೆ ಬಂದಿದ್ದ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕೈಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ನಿವಾಸಿಯಾದ 26 ವರ್ಷದ ಯುವತಿ ತನ್ನ ಸ್ನೇಹಿತರ ಜೊತೆಗೆ ಲಾಲ್ ಬಾಗ್ ಫುಡ್ ಲ್ಯಾಂಡ್ ಬಾರ್ ಗೆ ಬಂದಿದ್ದಳು. ರಾತ್ರಿ 11.30ರ ಸುಮಾರಿಗೆ ಈಕೆ ಅಲ್ಲಿನ ಲೇಡಿಸ್ ವಾಷ್ ರೂಮ್ ಹೋಗಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿರುವುದನ್ನು ನೋಡಿ, ಲೇಡಿಸ್ ಟಾಯ್ಲೆಟಲ್ಲಿ ಗಂಡಸರು ಏನು ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ಆನಂತರ, ಬಾರ್ ಕ್ಯಾಶಿಯರ್ ಬಳಿಯೂ ದೂರು ಹೇಳಿಕೊಂಡಿದ್ದಾಳೆ.
ಆಕೆಯ ಜೊತೆಗೆ ರಮಿತ್ ಪೂಜಾರಿ ಮತ್ತು ಹಮೀದ್ ಎಂಬ ಇಬ್ಬರು ಯುವಕರು ಇದ್ದರು. ಆನಂತರ, ಬಾರ್ ಹೊರಗಡೆ ಬಂದು ತಮ್ಮ ಕಾರಿನಲ್ಲಿ ಕುಳಿತು ಹಿಂದೆ ತೆಗೆಯುತ್ತಿದ್ದಾಗ, ಹಿಂಬದಿ ಬುಲೆಟ್ ಬೈಕಿನಲ್ಲಿ ಬಂದಿದ್ದ ವ್ಯಕ್ತಿಯ ಜೊತೆಗೂ ಕಿರಿಕ್ ಆಗಿದೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಕೈಮಾಡಿದ್ದಾನೆಂದು ಆಕೆ ಬರ್ಕೆ ಠಾಣೆಗೆ ದೂರು ನೀಡಿದ್ದಾಳೆ. ಆಗಸ್ಟ್ 25ರಂದು ತಡರಾತ್ರಿ ಘಟನೆ ನಡೆದಿದ್ದು, ಯುವತಿ ದೂರಿನಂತೆ ಪೊಲೀಸರು ಮಾನಭಂಗ, ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.
ಎರಡೂ ಕಡೆಯವರು ಕುಡಿದ ಮತ್ತಿನಲ್ಲಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯ ನೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ಯುವತಿ ಆರೋಪಿಸುತ್ತಿದ್ದು, ಘಟನೆ ಸಂದರ್ಭ ಕಾರಿನ ಹಿಂಬದಿ ನಿಂತಿದ್ದ ಯುವಕನೊಬ್ಬನ ಫೋಟೋ ತೆಗೆದು ಅದನ್ನು ಮಾಧ್ಯಮಕ್ಕೆ ನೀಡಲಾಗಿದೆ. ಯುವತಿಯೂ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Young girl alleges of harassment by unknown person, case booked at barke police station in Mangalore. The incident allegedly occurred on August 25 when the girl visited the hotel with a close friend.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm