ಬ್ರೇಕಿಂಗ್ ನ್ಯೂಸ್
30-08-24 09:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 30: ನಗರದ ಲಾಲ್ ಬಾಗ್ ಬಳಿಯ ಬಾರ್ ಒಂದರಲ್ಲಿ ಇಬ್ಬರು ಸ್ನೇಹಿತರ ಜೊತೆಗೆ ಬಂದಿದ್ದ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕೈಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ನಿವಾಸಿಯಾದ 26 ವರ್ಷದ ಯುವತಿ ತನ್ನ ಸ್ನೇಹಿತರ ಜೊತೆಗೆ ಲಾಲ್ ಬಾಗ್ ಫುಡ್ ಲ್ಯಾಂಡ್ ಬಾರ್ ಗೆ ಬಂದಿದ್ದಳು. ರಾತ್ರಿ 11.30ರ ಸುಮಾರಿಗೆ ಈಕೆ ಅಲ್ಲಿನ ಲೇಡಿಸ್ ವಾಷ್ ರೂಮ್ ಹೋಗಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿರುವುದನ್ನು ನೋಡಿ, ಲೇಡಿಸ್ ಟಾಯ್ಲೆಟಲ್ಲಿ ಗಂಡಸರು ಏನು ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ಆನಂತರ, ಬಾರ್ ಕ್ಯಾಶಿಯರ್ ಬಳಿಯೂ ದೂರು ಹೇಳಿಕೊಂಡಿದ್ದಾಳೆ.
ಆಕೆಯ ಜೊತೆಗೆ ರಮಿತ್ ಪೂಜಾರಿ ಮತ್ತು ಹಮೀದ್ ಎಂಬ ಇಬ್ಬರು ಯುವಕರು ಇದ್ದರು. ಆನಂತರ, ಬಾರ್ ಹೊರಗಡೆ ಬಂದು ತಮ್ಮ ಕಾರಿನಲ್ಲಿ ಕುಳಿತು ಹಿಂದೆ ತೆಗೆಯುತ್ತಿದ್ದಾಗ, ಹಿಂಬದಿ ಬುಲೆಟ್ ಬೈಕಿನಲ್ಲಿ ಬಂದಿದ್ದ ವ್ಯಕ್ತಿಯ ಜೊತೆಗೂ ಕಿರಿಕ್ ಆಗಿದೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಕೈಮಾಡಿದ್ದಾನೆಂದು ಆಕೆ ಬರ್ಕೆ ಠಾಣೆಗೆ ದೂರು ನೀಡಿದ್ದಾಳೆ. ಆಗಸ್ಟ್ 25ರಂದು ತಡರಾತ್ರಿ ಘಟನೆ ನಡೆದಿದ್ದು, ಯುವತಿ ದೂರಿನಂತೆ ಪೊಲೀಸರು ಮಾನಭಂಗ, ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.
ಎರಡೂ ಕಡೆಯವರು ಕುಡಿದ ಮತ್ತಿನಲ್ಲಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯ ನೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ಯುವತಿ ಆರೋಪಿಸುತ್ತಿದ್ದು, ಘಟನೆ ಸಂದರ್ಭ ಕಾರಿನ ಹಿಂಬದಿ ನಿಂತಿದ್ದ ಯುವಕನೊಬ್ಬನ ಫೋಟೋ ತೆಗೆದು ಅದನ್ನು ಮಾಧ್ಯಮಕ್ಕೆ ನೀಡಲಾಗಿದೆ. ಯುವತಿಯೂ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Young girl alleges of harassment by unknown person, case booked at barke police station in Mangalore. The incident allegedly occurred on August 25 when the girl visited the hotel with a close friend.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm