ಬ್ರೇಕಿಂಗ್ ನ್ಯೂಸ್
01-09-24 11:07 pm Mangalore Correspondent ಕ್ರೈಂ
ಮಂಗಳೂರು, ಸೆ.1: ಎರಡೂವರೆ ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ರೈಲಿನ ಮೂಲಕ ಕೇರಳಕ್ಕೆ ಒಯ್ಯಲು ಯತ್ನಿಸಿದ ಘಟನೆ ನಡೆದಿದ್ದು ದೂರು ಬಂದ ಎರಡೇ ಗಂಟೆಯೊಳಗೆ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕರ ಎರಡೂವರೆ ವರ್ಷದ ಹೆಣ್ಣು ಮಗು ಆಗಸ್ಟ್ 31 ರಂದು ಸಂಜೆ 4.30 ಗಂಟೆಗೆ ಕಾಣೆಯಾಗಿದ್ದು, ಎಲ್ಲ ಕಡೆ ಹುಡುಕಾಡಿ ಸಂಜೆ 7.30 ಗಂಟೆಗೆ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಕಂಕನಾಡಿ ನಗರ ಪೊಲೀಸರು ಎಲ್ಲ ಕಡೆ ಮಾಹಿತಿ ನೀಡಿ, ರೈಲ್ವೇ ಜಂಕ್ಷನ್ ಗೆ ಭೇಟಿ ನೀಡಿ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ವೃದ್ಧನೋರ್ವ ಮಗುವೊಂದನ್ನು ರೈಲಿನಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ್ದರು. ಕೇರಳ ಕಡೆಗೆ ಹೋಗುತ್ತಿದ್ದ ರೈಲಿನ ಬಗ್ಗೆ ಕಾಸರಗೋಡು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿ ಮಗುವಿನೊಂದಿಗೆ ವೃದ್ಧನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಕಂಕನಾಡಿ ಪೊಲೀಸ್ ನಿರೀಕ್ಷಕರ ತಂಡದ ಪಿ.ಎಸ್.ಐ.ಶಿವಕುಮಾರ್ ಮತ್ತು ಸಿಬ್ಬಂದಿಗಳು ರೈಲ್ವೇ ಪೊಲೀಸರಿಂದ ರಾತ್ರಿ 9.30 ಗಂಟೆಗೆ ವಶಕ್ಕೆ ಪಡೆದು ಹೆತ್ತವರಿಗೆ ಮಗುವನ್ನು ರಾತ್ರಿಯೇ ಒಪ್ಪಿಸಿರುತ್ತಾರೆ. ಆರೋಪಿಯನ್ನು ಎರ್ನಾಕುಲಂ ಜಿಲ್ಲೆಯ ಪರವೂರ್ ನಿವಾಸಿ ಅನೀಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈಗೆ ತಾಯಿ ಬಳಿ ಹೋಗಿ ವಾಪಸ್ಸು ರೈಲಿನಲ್ಲಿ ಮಂಗಳೂರಿಗೆ ಬಂದಿದ್ದ ಆರೋಪಿ, ಪಡೀಲ್ ಸಸ್ಯವನ ಮುಂಭಾಗದ ರಸ್ತೆಯಲ್ಲಿ ಬರುತ್ತಿರುವಾಗ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ನೋಡಿದ್ದು, ತನಗೂ 3 ಗಂಡು ಮಕ್ಕಳಿದ್ದು, ಹೆಣ್ಣು ಮಗು ಸಾಕಬೇಕೆಂಬ ಉದ್ದೇಶದಿಂದ ಕರೆದುಕೊಂಡು ಹೋಗಿರುವುದಾಗಿ ತನಿಖೆಯಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.
ಕಂಕನಾಡಿ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಪಿಎಸೈ ಶಿವಕುಮಾರ್, ಎಎಸ್ಐ ಅಶೋಕ್, ಸಿಬ್ಬಂದಿಗಳಾದ ಆಶಿತ್ ಡಿಸೋಜ, ಕುಶಾಲ್ ಹೆಗ್ಡೆ, ರಾಘವೇಂದ್ರ, ಪೂಜಾ ರವರು ಮಾಹಿತಿ ಬಂದ ಎರಡು ಗಂಟೆಯೊಳಗೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.
In a swift operation, the Kankanady town police cracked a kidnapping case within two hours after a two-and-a-half-year-old child was abducted near the Botanical Garden of the Forest Department in Alape of Padil in city. The incident occurred on the evening of August 31.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm