ಬ್ರೇಕಿಂಗ್ ನ್ಯೂಸ್
02-09-24 12:56 pm Mangalore Correspondent ಕ್ರೈಂ
ಪುತ್ತೂರು, ಸೆ.2: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
2023 ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪಿಸಲಾಗಿದೆ. ದೌರ್ಜನ್ಯ ಎಸಗಿರುವ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಹೇಳಿದ್ದು IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ವಿರುದ್ಧ ರೆಬೆಲ್ ಆಗಿದ್ದ ಅರುಣ್ ಕುಮಾರ್ ಪುತ್ತಿಲ, ಪುತ್ತೂರಿನಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಬಿಜೆಪಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹಿಂದುತ್ವದ ಹೆಸರಿನಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸಿದ್ದರಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ ಆಗಿತ್ತು.
ಪುತ್ತಿಲ ಅಭಿಮಾನಿಯಾಗಿ ಜಾಲತಾಣದಲ್ಲಿ ಫಾಲೋ ಮಾಡಿದ್ದೆ ಎಂದಿರುವ ಮಹಿಳೆ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೇಸು ದಾಖಲಾದ ಬಗ್ಗೆ ಅರುಣ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು ರಾಜಕೀಯ ಪ್ರೇರಿತ ಸುಳ್ಳು ದೂರು ಎಂದಿದ್ದಾರೆ. ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಸೇರಿದ್ದರು. ಅವರ ಬಿಜೆಪಿ ಸೇರ್ಪಡೆಗೆ ಪುತ್ತೂರಿನಲ್ಲಿ ಬಿಜೆಪಿ ನಾಯಕರೇ ವಿರೋಧಿಸಿದ್ದರು. ಅಲ್ಲದೆ, ಈ ಹಿಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಬಲಿಗರು ವಿರೋಧ ಹೊಂದಿದ್ದರು. ಹೀಗಾಗಿ ಪುತ್ತೂರಿನಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದು ಅರುಣ್ ಪುತ್ತಿಲ ವಿರುದ್ಧ ಸ್ವಪಕ್ಷೀಯರೇ ಪಿತೂರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
A sexual harassment case has been registered against Karnataka BJP leader Arun Kumar Puthila based on a complaint by a 47-year-old woman, police said. In her complaint, the woman alleges that the BJP leader sexually assaulted her at a Bengaluru hotel in June 2023. He took photos, selfies, and videos during the alleged assault and used them to blackmail her, the woman claimed.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm