ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm