ಬ್ರೇಕಿಂಗ್ ನ್ಯೂಸ್
02-09-24 11:00 pm Mangalore Correspondent ಕ್ರೈಂ
ಮಂಗಳೂರು, ಸೆ.2: ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಮಾಫಿಯಾ ಹೆಚ್ಚುತ್ತಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅಪರಾಧ ಪ್ರಮಾಣಕ್ಕೆ ಕಾರಣವಾಗುತ್ತಿದ್ದು, ಯುವಕರು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಕಠಿಣ ಜರುಗಿಸುವಂತೆ ನಿರ್ದೇಶನ ನೀಡಬೇಕೆಂದು ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪತ್ರ ಬರೆದಿದ್ದಾರೆ.
ಗೃಹ ಸಚಿವರಿಗೆ ಪತ್ರ ಬರೆದು ವಿವಿಧ ವಿಚಾರಗಳ ಬಗ್ಗೆ ಗಮನ ಸೆಳೆದಿದ್ದು, ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಡ್ರಗ್ಸ್ ಮಾಫಿಯಾದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಮಾದಕ ವ್ಯಸನದಿಂದಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ.

ವಿದ್ಯಾರ್ಥಿಗಳು ಮತ್ತು ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾದಂತಹ ಅಕ್ರಮ ಚಟುವಟಿಕೆ ಹೆಚ್ಚಿದ್ದು ಈ ಬಗ್ಗೆ ಕಠಿಣ ಕ್ರಮಗಳನ್ನು ಜರುಗಿಸಬೇಕಾಗಿದೆ. ಎಲ್ಲ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಗೃಹ ಇಲಾಖೆಯಿಂದ ಕರಾವಳಿಯ ಪೊಲೀಸ್ ವಿಭಾಗಕ್ಕೆ ಕಠಿಣ ಕ್ರಮ ಜರುಗಿಸಲು ನಿರ್ದೇಶನಗಳನ್ನು ನೀಡುವಂತೆ ಮಂಜುನಾಥ ಭಂಡಾರಿ ಪತ್ರದ ಮೂಲಕ ಕೇಳಿಕೊಂಡಿದ್ದಾರೆ.
Congress mangalore MLC Manjunath Bhandary writes letter to Home minister of rise in drugs in Mangalore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 06:36 pm
HK News Staffer
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am