ಬ್ರೇಕಿಂಗ್ ನ್ಯೂಸ್
03-09-24 08:40 pm Udupi Correspondent ಕ್ರೈಂ
ಉಡುಪಿ, ಸೆ.3: ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಹಪಾಠಿ ಯುವತಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್ ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಉಡುಪಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ. ಅಲ್ಲಿ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದು ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಕ್ಕೆ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮಾಡಿ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Forced Conversion in Karnataka, Dr Mohammed Danish Khan arrested for forcing medical student to convert to Islam in Udupi.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm