ಬ್ರೇಕಿಂಗ್ ನ್ಯೂಸ್
04-09-24 12:18 pm Bangalore Correspondent ಕ್ರೈಂ
ಬೆಂಗಳೂರು, ಸೆ 04: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದುವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಸೇರಿದಂತೆ 231 ಸಾಕ್ಷ್ಯಗಳನ್ನೊಳಗೊಂಡಂತೆ ಒಟ್ಟು 3,991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಮಾಹಿತಿ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಬೆಂಗಳೂರು ಪಶ್ಚಿಮ ವಲಯದ ಅಪರ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಎಸಿಪಿ ಚಂದನ್ ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ಈ ಚಾರ್ಜ್ಶೀಟ್ ಸಿದ್ಧಪಡಿಸಿದೆ. ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ.
ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಫ್ಎಸ್ಎಲ್ ಹಾಗೂ ಸಿಎಫ್ಎಸ್ಎಲ್ ವರದಿಯ 8 ಸಾಕ್ಷಿಗಳು, ಸಿಆರ್ಪಿಸಿ 161 ಹಾಗೂ 164ರಡಿಯಲ್ಲಿ ದಾಖಲಿಸಲಾಗಿರುವ 27 ಜನರ ಹೇಳಿಕೆಗಳು, ಪಂಚರು 29, 8 ಜನ ಸರ್ಕಾರಿ ಅಧಿಕಾರಿಗಳು (ತಹಶೀಲ್ದಾರರು, ವೈದ್ಯರು ಹಾಗೂ ಆರ್.ಟಿ.ಓ ಅಭಿಯಂತರರು), 56 ಜನ ಪೊಲೀಸರು ಸೇರಿದಂತೆ ಒಟ್ಟು 231 ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Murder of Renukaswamy, police submit 3991 pages of chargesheet to court against actor Darshan and gang. The police have collected over 200 pieces of circumstantial evidence in the case, including forensic reports of bloodstains on the clothes of Darshan and other accused.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm