ಬ್ರೇಕಿಂಗ್ ನ್ಯೂಸ್
04-09-24 12:18 pm Bangalore Correspondent ಕ್ರೈಂ
ಬೆಂಗಳೂರು, ಸೆ 04: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದುವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಸೇರಿದಂತೆ 231 ಸಾಕ್ಷ್ಯಗಳನ್ನೊಳಗೊಂಡಂತೆ ಒಟ್ಟು 3,991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಮಾಹಿತಿ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಬೆಂಗಳೂರು ಪಶ್ಚಿಮ ವಲಯದ ಅಪರ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಎಸಿಪಿ ಚಂದನ್ ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ಈ ಚಾರ್ಜ್ಶೀಟ್ ಸಿದ್ಧಪಡಿಸಿದೆ. ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ.
ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಫ್ಎಸ್ಎಲ್ ಹಾಗೂ ಸಿಎಫ್ಎಸ್ಎಲ್ ವರದಿಯ 8 ಸಾಕ್ಷಿಗಳು, ಸಿಆರ್ಪಿಸಿ 161 ಹಾಗೂ 164ರಡಿಯಲ್ಲಿ ದಾಖಲಿಸಲಾಗಿರುವ 27 ಜನರ ಹೇಳಿಕೆಗಳು, ಪಂಚರು 29, 8 ಜನ ಸರ್ಕಾರಿ ಅಧಿಕಾರಿಗಳು (ತಹಶೀಲ್ದಾರರು, ವೈದ್ಯರು ಹಾಗೂ ಆರ್.ಟಿ.ಓ ಅಭಿಯಂತರರು), 56 ಜನ ಪೊಲೀಸರು ಸೇರಿದಂತೆ ಒಟ್ಟು 231 ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Murder of Renukaswamy, police submit 3991 pages of chargesheet to court against actor Darshan and gang. The police have collected over 200 pieces of circumstantial evidence in the case, including forensic reports of bloodstains on the clothes of Darshan and other accused.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm