ಬ್ರೇಕಿಂಗ್ ನ್ಯೂಸ್
09-12-20 05:48 pm Headline Karnataka News Network ಕ್ರೈಂ
ಕಲಬುರಗಿ, ಡಿ.9 : ಲಂಚ ಸ್ವೀಕಾರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ ಇ ಸೆಲ್)ದಲ್ಲಿ ಡಿವೈಎಸ್ಪಿ ಆಗಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಇವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಮಾಡಿದ್ದಾರೆ.
ವಿಜಯಲಕ್ಷ್ಮಿ ಶಹಾಬಾದ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕಾರ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಇ ಸೆಲ್)ದಲ್ಲಿ ಡಿವೈಎಸ್ಪಿಯಾಗಿದ್ದಾರೆ.
2015ರ ಡಿಸೆಂಬರ್ ತಿಂಗಳಲ್ಲಿ ಪೆಟ್ರೋಲ್ ಬಂಕ್ ಒಂದರಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಆರೋಪದಲ್ಲಿ ರಾಜು ಎಂಬುವರ ವಿರುದ್ಧ ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜುನನ್ನು ಬಂಧಿಸಿ ಅವರ ವಾಹನವನ್ನು ಜಪ್ತಿ ಮಾಡಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ವಾಹನ ಬಿಡಿಸಿಕೊಳ್ಳಲು ಶಹಾಬಾದ್ ಠಾಣೆಗೆ ರಾಜು ಬಂದಿದ್ದರು. ಈ ವೇಳೆ, ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆ ಇಟ್ಟಿದ್ದರೆನ್ನಲಾಗಿತ್ತು. ರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ದಾಳಿ ನಡೆಸಿದ್ದು ಹಣದ ಸಮೇತ ವಿಜಯಲಕ್ಷ್ಮೀ ಸಿಕ್ಕಿಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ಪಡೆದು, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿಕೊಟ್ಟಿದ್ದಾರೆ.
The District Principal and Special Session Court here on Tuesday sentenced a Deputy Superintendent of Police to four years' imprisonment and slapped a fine of Rs 10,000 for accepting a bribe.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm