ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm