ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am