ಬ್ರೇಕಿಂಗ್ ನ್ಯೂಸ್
07-09-24 05:45 pm HK News Desk ಕ್ರೈಂ
ಬೆಂಗಳೂರು, ಸೆ.7: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ.
ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಇದರ ನಡುವೆ, ಪತಿ ಶ್ರೀಹರಿ ಬೇರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಾಳೆ. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಎರಡು ದಿನಗಳ ಹಿಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನುಶಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆಕೆ ಸಾವು ಕಂಡಿದ್ದಾರೆ.
ನಡತೆ ಸರಿಯಿಲ್ಲ ಎಂದು ಹೇಳಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಕಚೇರಿಯಲ್ಲಿ ಟೀಮ್ ಲೀಡರ್ ಆಗಿದ್ದ. ಅದಾದಮೇಲೆ ಹೆಂಡ್ತಿ ಮೇಲೆ ಟಾರ್ಚರ್ ಮತ್ತೂ ಜಾಸ್ತಿ ಮಾಡಿದ್ದ. ಸಾಯೋದಿನ ಪಕ್ಕದಲ್ಲೇ ಇದ್ದ. ಆಕೆ ಸಾಯ್ತಿದಾಳೆ ಅಂತಾ ಗೊತ್ತಿದ್ರೂ ನಮಗೆ ಹೇಳಲಿಲ್ಲ. ಎಲ್ಲರೂ ಒಂದೇ ಮನೆಯಲ್ಲೇ ಇದ್ದೆವು. ಮಾಸ್ಟರ್ ಬೆಡ್ ರೂಮ್ ನಲ್ಲಿ ಅವರು ಇದ್ದರು. ಅವ್ಳು ಸಾಯ್ಲಿ ಅಂತಾ ಸಾಯೋ ಟೈಮಲ್ಲಿ ಬಂದು ನಮಗೆ ಹೇಳ್ದ. ಹತ್ತು ನಿಮಿಷ ಮುಂಚೆ ಹೇಳಿದ್ರೆ ನಾವು ಡೋರ್ ಒಡೆದು ಮಗಳನ್ನ ಬದುಕಿಸಿಕೊಳ್ತಿದ್ವಿ. 2 ವರ್ಷದ ಮಗು ಅನಾಥವಾಗಿದೆ. ಅಮ್ಮ ಎಲ್ಲಿ ಅಂತಾ ಕೇಳುತ್ತೆ. ನಿಮ್ಮಮ್ಮ ಬರಲ್ಲ ಅಂತಾ ಹೇಗೆ ಹೇಳೋದು. ನನ್ನ ಮಗಳ ಜೀವನ ಹಾಳ್ಮಾಡಿಬಿಟ್ಟ ಎಂದು ಯುವತಿ ತಾಯಿ ರೇಣುಕಾ ಕಣ್ಣೀರಿಟ್ಟಿದ್ದಾರೆ.
Wife commits suicide over husbands sex torture in Bangalore. The deceased has been identified as Anusha. Husband was showing her sex videos and forcing her to have such sex.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm