ಬ್ರೇಕಿಂಗ್ ನ್ಯೂಸ್
12-09-24 01:37 pm Mangaluru Correspondent ಕ್ರೈಂ
ಮಂಡ್ಯ, ಸೆ.12: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಿನ್ನೆ ರಾತ್ರಿ ಗಣಪತಿ ವಿಸರ್ಜನೆ ಮೆರವಣಿ ನಡೆಯುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಕೋಮು ದ್ವೇಷದ ಗಲಭೆ ಹೊತ್ತುಕೊಂಡಿದೆ. ಮಂಡ್ಯ- ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ನಿವಾಸ ಸೇರಿದಂತೆ ಹಿಂದೂಗಳ ಮನೆಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ 10ಕ್ಕೆ ಹೆಚ್ಚು ಬೈಕ್ ಸುಟ್ಟು ಕರಕಲಾಗಿವೆ, 13ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಇಡಲಾಗಿದೆ. ಎರಡು ಗುಂಪಿನವರೂ ಪರಸ್ಪರ ಕಲ್ಲು ತೂರಾಟ ನಡೆಸಿದ್ದು ರಾತ್ರೋರಾತ್ರಿ ಕೋಮು ಘರ್ಷಣೆ ಉಂಟಾಗಿದೆ. ಎಂಟು ಮಂದಿ ಗಾಯಗೊಂಡಿದ್ದು ಓರ್ವ ಪಿಎಸ್ಐ ಸಿಬಂದಿಯೂ ಗಾಯಗೊಂಡಿದ್ದಾರೆ. ಘಟನೆಗೆ ರಾಜ್ಯಾದ್ಯಂತ ಹಿಂದು ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆಕಸ್ಮಿಕ ರೀತಿ ನಡೆದುಹೋಗಿದೆ, ಇದಕ್ಕೆ ದೊಡ್ಡ ಪ್ರಚಾರ ಕೊಡಬೇಡಿ !
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಗೃಹ ಸಚಿವ ಪರಮೇಶ್ವರ್, ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಒಬ್ಬರಿಗೊಬ್ಬರು ಘರ್ಷಣೆ ಕಲ್ಲು ತೂರಾಟ ಮಾಡಿಕೊಂಡಿದ್ದಾರೆ. ಆ ನಂತರ ಎಲ್ಲವೂ ಸರಿಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟರು. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಈ ರೀತಿಯ ಘಟನೆ ನಡೆಯಬಾರದಿತ್ತು. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ. ಆಕಸ್ಮಿಕ ರೀತಿಯಲ್ಲಿ ನಡೆದುಹೋಗಿದೆ ಎಂದು ಹೇಳಿದ್ದಾರೆ.
52 ಜನ ಬಂಧನ, ಪೊಲೀಸರಿಗೂ ಕಲ್ಲೇಟು
ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಗಲಭೆಗೆ ಸಂಬಂಧಿಸಿದಂತೆ ಎರಡೂ ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿವೆ. ಅದನ್ನು ಆಧರಿಸಿ ಕಲ್ಲು ತೂರಿದವರು ಹಾಗು ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೂ ಕಲ್ಲೇಟು ಬಿದ್ದಿದ್ದು, ಓರ್ವ ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ಕಾಣುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
Communal tensions gripped Nagamangala town in Karnataka's Mandya district on Wednesday after clashes erupted between two groups during the Ganpati procession, news agency PTI reported.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm