ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.

ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿ ಘೋಷ್ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm