ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.
ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿ ಘೋಷ್ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm