ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.
ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿ ಘೋಷ್ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm