ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.

ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿ ಘೋಷ್ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm