ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.

ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿ ಘೋಷ್ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm