ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm