ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm