ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm