ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm