ಬ್ರೇಕಿಂಗ್ ನ್ಯೂಸ್
15-09-24 01:21 pm Bangalore Correspondent ಕ್ರೈಂ
ಬೆಂಗಳೂರು, ಸೆ.15: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನನಗೆ ಪರಿಚಿತರು, ಕೋರ್ಟಿನಲ್ಲಿ ಕೆಲಸ ತೆಗೆಸಿಕೊಡುತ್ತೇನೆ ಎಂದು ನಂಬಿಸಿ 80ಕ್ಕೂ ಅಧಿಕ ಜನರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳದಲ್ಲಿ ಖಾಸಗಿ ಕಾಲೇಜು ನಡೆಸುತ್ತಿರುವ ಸಿದ್ದಲಿಂಗಯ್ಯ ಹಿರೇಮಠ ಆರೋಪಿಯಾಗಿದ್ದು ಸಂತ್ರಸ್ತರು ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಪಿಎಸ್ಐ ನೇಮಕಾತಿ, ಕೆಪಿಟಿಸಿಎಲ್ ನೇಮಕಾತಿ ಸೇರಿ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಸದ್ದು ಮಾಡಿರುವಾಗಲೇ ನ್ಯಾಯಾಲಯಗಳಲ್ಲಿ ಎಫ್ಡಿಎ, ಪ್ರೋಸೆಸ್ ಸರ್ವರ್ ಹುದ್ದೆ ಕೊಡಿಸುವುದಾಗಿ ಅಮಾಯಕರನ್ನು ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪ ಕೇಳಿಬಂದಿದೆ. ಕೊಪ್ಪಳದಲ್ಲಿ ಖಾಸಗಿ ಕಾಲೇಜು ನಡೆಸುತ್ತಿರುವ ಸಿದ್ದಲಿಂಗಯ್ಯ ಹಿರೇಮಠ ಪ್ರಕರಣದ ಮಾಸ್ಟರ್ ಮೈಂಡ್. ಬೆಂಗಳೂರಿನ ನಿವಾಸಿ ಅಬ್ದುಲ್ ರಜಾಕ್ ದೂರು ಆಧರಿಸಿ ಈತನ ವಿರುದ್ಧ ಬೆಂಗಳೂರು ಕೇಂದ್ರ ಅಪರಾಧ ಶಾಖೆ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಜುಲೈ 31ರಂದು ಪ್ರಕರಣ ದಾಖಲಾಗಿದೆ. ತನಗೆ ನ್ಯಾಯಾಧೀಶರು ಪರಿಚಯವಿದ್ದಾರೆ ಎಂದು ಅಭ್ಯರ್ಥಿಗಳನ್ನು ನಂಬಿಸಿ ಹಣ ಪಡೆದು ವಂಚಿಸಿದ್ದಾನೆ ಎಂದು ದೂರು ನೀಡಿದ್ದಾರೆ.
ತನ್ನ ಚಿಕ್ಕಪ್ಪನ ಪುತ್ರ ಜಾವೇದ್ಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಆರೋಪಿ 7 ಲಕ್ಷ ರೂ. ಪಡೆದಿದ್ದಾನೆ. ಅಷ್ಟೇ ಅಲ್ಲದೆ ತನ್ನ ಪರಿಚಿತರಿಗೂ ಮೋಸ ಮಾಡಿದ್ದು ಕೊರ್ಟ್ನಲ್ಲಿ ಪ್ರೋಸೆಸ್ ಸರ್ವರ್ ಕೆಲಸ ಕೊಡಿಸುವುದಾಗಿ ಹೇಳಿ ನಮ್ಮ ಪರಿಚಯಸ್ಥರಿಂದಲೇ ಆರೋಪಿ 49 ಲಕ್ಷ ರೂ. ಪಡೆದು ವಂಚಿಸಿದ್ದಾನೆ. ಈ ರೀತಿ 80ಕ್ಕೂ ಹೆಚ್ಚು ಮಂದಿಗೆ ವಂಚಿಸಿರುವ ಆರೋಪಗಳಿದ್ದು ತನಿಖೆ ನಡೆಸಬೇಕು ಎಂದು ಸಿಸಿಬಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
A fraudulent job scheme has been uncovered, involving numerous job seekers who were misled into believing they would be offered positions as FDA process servers in courts. The perpetrator of this scam is Siddalingaiah Hiremath, the spouse of a former councillor of Koppal and the proprietor of a private college. On July 31, 2024, Abdul Razak from Bengaluru filed a complaint about Siddalingaiah Hiremath at the Bengaluru Central Crime Branch (CCB) police station.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm