ಬ್ರೇಕಿಂಗ್ ನ್ಯೂಸ್
21-09-24 10:24 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ನಗರದ ವೈಯ್ಯಾಲಿ ಕಾವಲ್ ನ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಾಲಕ್ಷ್ಮೀ (26) ಎಂಬ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಳೆದ 19 ದಿನಗಳ ಹಿಂದೆಯೇ ಆಕೆಯನ್ನು ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಂತಕರು ಆಕೆಯ ದೇಹವನ್ನು 30 ತುಂಡುಗಳಾಗಿ ಕತ್ತರಿಸಿ, ಆ ತುಂಡುಗಳನ್ನು ಫ್ರಿಡ್ಜ್ ನಲ್ಲಿ ಇಟ್ಟು ಹೋಗಿದ್ದಾರೆ. ಆಕೆಯ ದೇಹದ ತುಂಡುಗಳಿಂದ ಬಂದ ರಕ್ತ ಫ್ರಿಡ್ಜ್ ನಿಂದ ಸೋರಿಕೆಯಾಗಿ ಮನೆಯ ತುಂಬೆಲ್ಲಾ ಹರಡಿತ್ತು. ಶುಕ್ರವಾರದಂದು ಆಕೆಯಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಮೊದಮೊದಲಿಗೆ, ಯಾವುದೋ ಹೆಗ್ಗಣ ಸತ್ತಿರುವ ವಾಸನೆ ಇರಬಹುದು ಎಂದು ನೆರೆಯವರು ತಿಳಿದಿದ್ದರು.

ಆದರೆ, ದಿನಗಳೆದಂತೆ ವಾಸನೆ ಮಹಾಲಕ್ಷ್ಮಿಯಿದ್ದ ಮನೆಯಿಂದಲೇ ಬರುತ್ತಿದ್ದ ಕಾರಣಕ್ಕೆ ನೆರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಪೊಲೀಸರು ಬಂದು ಪರಿಶೀಲಿಸಿ ಬಾಗಿಲು ಒಡೆದು ಹೋದಾಗ ಮನೆಯಲ್ಲಿ ಹರಡಿದ್ದ ರಕ್ತದಲ್ಲಿ ಅದಾಗಲೇ ಹುಳ ಬಿದ್ದಿದ್ದವು. ರಕ್ತ ಎಲ್ಲಿಂದ ಸೋರಿದೆ ಎಂದು ಪರಿಶೀಲಿಸಿದಾಗ ಆ ರಕ್ತ ಪೊಲೀಸರನ್ನು ಮನೆಯಲ್ಲಿದ್ದ ಫ್ರಿಡ್ಜ್ ಕಡೆಗೆ ಕರೆದೊಯ್ದಿದೆ. ಫ್ರಿಡ್ಜ್ ಬಾಗಿಲು ತೆಗೆದಾಗ ಪೊಲೀಸರು ಫ್ರಿಡ್ಜ್ ನಲ್ಲಿದ್ದ ಯುವತಿಯ ದೇಹದ 30 ಪೀಸ್ ಗಳನ್ನು ನೋಡಿ ದಂಗಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆಕೆ ನೇಪಾಳದವಳು ಎಂದು ಹೇಳಲಾಗಿದೆ. ಆಕೆಯು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದಳು. ಪ್ರತಿ ದಿನ ಬೆಳಗ್ಗೆ 9.30ಕ್ಕೆ ಕೆಲಸಕ್ಕೆ ಹೋದರೆ ರಾತ್ರಿ 9 ಗಂಟೆಗೆ ಮನೆಗೆ ಬರುತ್ತಿದ್ದಳು. ಒಮ್ಮೆ ಮನೆಯೊಳಗೆ ಹೋದರೆ ಪುನಃ ಆಕೆ ಹೊರಕ್ಕೆ ಬರುತ್ತಿದ್ದುದು ಮರುದಿನ ಡ್ಯುಟಿಗೆ ಹೋಗಬೇಕಾದಾಗ ಮಾತ್ರ ಎಂದು ನೆರೆಯವರು ಹೇಳಿದ್ದಾರೆ.
ಮತ್ತೊಂದು ಮೂಲದ ಪ್ರಕಾರ, ಆಕೆಯು ನೇಪಾಳದವಳಾಗಿದ್ದು ವಿವಾಹಿತೆಯಾಗಿದ್ದಳು. ದಂಪತಿಯಿಬ್ಬರೂ ಮುನೇಶ್ವರನಗರದಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಆಕೆ, ಹುಕುಂ ಸಿಂಗ್ ಎಂಬಾತನನ್ನು ಮದುವೆಯಾಗಿದ್ದಳು. ಆ ದಂಪತಿಗೊಂದು ಮಗುವೂ ಇದೆ. ಆದರೆ, ಆಕೆ ತನ್ನ ಪತಿ ಹಾಗೂ ಮಗುವನ್ನು ತೊರೆದಿದ್ದಳು. ಪತಿ ಹಾಗೂ ಮಗುವನ್ನು ತೊರೆದ ನಂತರ ಆಕೆ ವೈಯ್ಯಾಲಿ ಕಾವಲ್ ನಲ್ಲಿ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ.
In a shocking incident, a 26-year-old home-alone woman was murdered and her body parts cut into several pieces and stuffed in the fridge of the house she was living in at Vinayaka Nagar in Vyalikaval here on Saturday.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm