ಬ್ರೇಕಿಂಗ್ ನ್ಯೂಸ್
21-09-24 10:56 pm Mangalore Correspondent ಕ್ರೈಂ
ಮಂಗಳೂರು, ಸೆ.21: ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಮಾರ್ಪಾಡಿ ಹಾಗೂ ಮೂಡು ಮಾರ್ನಾಡಿನಲ್ಲಿ ವೃದ್ಧ ಮಹಿಳೆಯರಿಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಸ್ಕೂಟರಿನಲ್ಲಿ ಪರಾರಿಯಾಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಹಬೀಬ್ ಹಸನ್ (42) ಮತ್ತು ಬಂಟ್ವಾಳ ಜೋಡುಮಾರ್ಗ ನಿವಾಸಿ ಉಮ್ಮರ್ ಸಿಯಾಫ್ ಅಲಿಯಾಸ್ ಚಿಯಾ (29) ಬಂಧಿತರು. ಇವರು ಕಳೆದ ಆಗಸ್ಟ್ 15ರಂದು ಮಾರ್ಪಾಡಿ ಗ್ರಾಮದ ನಿರ್ಮಲ ಪಂಡಿತ್ (70) ಎಂಬವರ ಕುತ್ತಿಗೆಯಿಂದ 24 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗಿದ್ದರು. ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿ ಸೆ.2ರಂದು 82 ವರ್ಷದ ಪ್ರೇಮಾ ಎಂಬವರ ಕುತ್ತಿಗೆಯಿಂದ ಮೂರು ಪವನ್ ತೂಕದ ಚಿನ್ನದ ಸರವನ್ನು ಸ್ಕೂಟರಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಎಗರಿಸಿ ಪರಾರಿಯಾಗಿದ್ದರು. ಎರಡೂ ಘಟನೆ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಬೀಬ್ ಹಸನ್ ಈ ಹಿಂದೆ ಹಲವಾರು ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕೇಸು ಎದುರಿಸುತ್ತಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ವಶಕ್ಕೆ ಪಡೆದಿದ್ದು ಅದು ಕದ್ರಿ ಪೊಲೀಸ್ ಠಾಣೆಯಿಂದ ಕಳವಾಗಿರುವ ಸ್ಕೂಟರ್ ಆಗಿರುತ್ತದೆ. ಸ್ಕೂಟರ್ ಮತ್ತು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದು ಒಟ್ಟು 2.50 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ., ಎಎಸ್ಐ ಮೋಹನದಾಸ್ ಕೋಟ್ಯಾನ್, ಎಎಸ್ಐ ಪ್ರಶಾಂತ್, ಅಪರಾಧ ವಿಭಾಗದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ನಾಗರಾಜ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Gold jewellery theft of old women, natorious thief arrested from ullal in Mangalore by Moodbidri police.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm