ಬ್ರೇಕಿಂಗ್ ನ್ಯೂಸ್
21-09-24 10:56 pm Mangalore Correspondent ಕ್ರೈಂ
ಮಂಗಳೂರು, ಸೆ.21: ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಮಾರ್ಪಾಡಿ ಹಾಗೂ ಮೂಡು ಮಾರ್ನಾಡಿನಲ್ಲಿ ವೃದ್ಧ ಮಹಿಳೆಯರಿಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಸ್ಕೂಟರಿನಲ್ಲಿ ಪರಾರಿಯಾಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಹಬೀಬ್ ಹಸನ್ (42) ಮತ್ತು ಬಂಟ್ವಾಳ ಜೋಡುಮಾರ್ಗ ನಿವಾಸಿ ಉಮ್ಮರ್ ಸಿಯಾಫ್ ಅಲಿಯಾಸ್ ಚಿಯಾ (29) ಬಂಧಿತರು. ಇವರು ಕಳೆದ ಆಗಸ್ಟ್ 15ರಂದು ಮಾರ್ಪಾಡಿ ಗ್ರಾಮದ ನಿರ್ಮಲ ಪಂಡಿತ್ (70) ಎಂಬವರ ಕುತ್ತಿಗೆಯಿಂದ 24 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗಿದ್ದರು. ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿ ಸೆ.2ರಂದು 82 ವರ್ಷದ ಪ್ರೇಮಾ ಎಂಬವರ ಕುತ್ತಿಗೆಯಿಂದ ಮೂರು ಪವನ್ ತೂಕದ ಚಿನ್ನದ ಸರವನ್ನು ಸ್ಕೂಟರಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಎಗರಿಸಿ ಪರಾರಿಯಾಗಿದ್ದರು. ಎರಡೂ ಘಟನೆ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಬೀಬ್ ಹಸನ್ ಈ ಹಿಂದೆ ಹಲವಾರು ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕೇಸು ಎದುರಿಸುತ್ತಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ವಶಕ್ಕೆ ಪಡೆದಿದ್ದು ಅದು ಕದ್ರಿ ಪೊಲೀಸ್ ಠಾಣೆಯಿಂದ ಕಳವಾಗಿರುವ ಸ್ಕೂಟರ್ ಆಗಿರುತ್ತದೆ. ಸ್ಕೂಟರ್ ಮತ್ತು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದು ಒಟ್ಟು 2.50 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ., ಎಎಸ್ಐ ಮೋಹನದಾಸ್ ಕೋಟ್ಯಾನ್, ಎಎಸ್ಐ ಪ್ರಶಾಂತ್, ಅಪರಾಧ ವಿಭಾಗದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ನಾಗರಾಜ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Gold jewellery theft of old women, natorious thief arrested from ullal in Mangalore by Moodbidri police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm