ಬ್ರೇಕಿಂಗ್ ನ್ಯೂಸ್
21-09-24 10:56 pm Mangalore Correspondent ಕ್ರೈಂ
ಮಂಗಳೂರು, ಸೆ.21: ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಮಾರ್ಪಾಡಿ ಹಾಗೂ ಮೂಡು ಮಾರ್ನಾಡಿನಲ್ಲಿ ವೃದ್ಧ ಮಹಿಳೆಯರಿಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಸ್ಕೂಟರಿನಲ್ಲಿ ಪರಾರಿಯಾಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಹಬೀಬ್ ಹಸನ್ (42) ಮತ್ತು ಬಂಟ್ವಾಳ ಜೋಡುಮಾರ್ಗ ನಿವಾಸಿ ಉಮ್ಮರ್ ಸಿಯಾಫ್ ಅಲಿಯಾಸ್ ಚಿಯಾ (29) ಬಂಧಿತರು. ಇವರು ಕಳೆದ ಆಗಸ್ಟ್ 15ರಂದು ಮಾರ್ಪಾಡಿ ಗ್ರಾಮದ ನಿರ್ಮಲ ಪಂಡಿತ್ (70) ಎಂಬವರ ಕುತ್ತಿಗೆಯಿಂದ 24 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗಿದ್ದರು. ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿ ಸೆ.2ರಂದು 82 ವರ್ಷದ ಪ್ರೇಮಾ ಎಂಬವರ ಕುತ್ತಿಗೆಯಿಂದ ಮೂರು ಪವನ್ ತೂಕದ ಚಿನ್ನದ ಸರವನ್ನು ಸ್ಕೂಟರಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಎಗರಿಸಿ ಪರಾರಿಯಾಗಿದ್ದರು. ಎರಡೂ ಘಟನೆ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಬೀಬ್ ಹಸನ್ ಈ ಹಿಂದೆ ಹಲವಾರು ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕೇಸು ಎದುರಿಸುತ್ತಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ವಶಕ್ಕೆ ಪಡೆದಿದ್ದು ಅದು ಕದ್ರಿ ಪೊಲೀಸ್ ಠಾಣೆಯಿಂದ ಕಳವಾಗಿರುವ ಸ್ಕೂಟರ್ ಆಗಿರುತ್ತದೆ. ಸ್ಕೂಟರ್ ಮತ್ತು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದು ಒಟ್ಟು 2.50 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ., ಎಎಸ್ಐ ಮೋಹನದಾಸ್ ಕೋಟ್ಯಾನ್, ಎಎಸ್ಐ ಪ್ರಶಾಂತ್, ಅಪರಾಧ ವಿಭಾಗದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ನಾಗರಾಜ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Gold jewellery theft of old women, natorious thief arrested from ullal in Mangalore by Moodbidri police.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm