ಬ್ರೇಕಿಂಗ್ ನ್ಯೂಸ್
22-09-24 02:37 pm HK News Desk ಕ್ರೈಂ
ಕಾರವಾರ, ಸೆ 22: ತಾಲ್ಲೂಕಿನ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ (58) ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ ಉದ್ಯಮಿ ತನ್ನ ಊರಾದ ಹಣಕೋಣಕ್ಕೆ ವಾರದ ಹಿಂದೆ ಬಂದಿದ್ದರು. ಭಾನುವಾರ ಪುಣೆಗೆ ಹೊರಡಲು ಸಿದ್ದರಾಗಿದ್ದರು. ನಸುಕಿನ ಜಾವ 5.30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ.
ನಾಲ್ಕರಿಂದ ಐದು ಜನರಿದ್ದ ಗುಂಪೊಂದು ಮನೆಗೆ ನುಗ್ಗಿ ಕೃತ್ಯ ನಡೆಸಿದೆ. ವಿನಾಯಕ ಅವರ ಪತ್ನಿ ವೃಶಾಲಿ ಅವರ ಮೇಲೆಯೂ ಹಲ್ಲೆ ನಡೆಸಲಾಗಿದೆ. ಇವರಿಬ್ಬರೇ ಮನೆಯಲ್ಲಿದ್ದರು ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣ ಏನು ಎಂಬುದು ತಿಳಿದಿಲ್ಲ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
ಸಾತೇರಿ ಜಾತ್ರೆಗೆ ಬಂದ ಇವರು ಭಾನುವಾರ ಬೆಳಗ್ಗೆ ಮರಳಿ ಹೊರಡಲು ಸಿದ್ದರಾಗಿದ್ದರು. ಈ ವೇಳೆ ಬೆಳಗಿನಜಾವ 5.30ರ ಸುಮಾರಿಗೆ ಐದು ಜನ ಅಪರಿಚಿತರು ಮನಗೆ ನುಗ್ಗಿ ಅಡುಗೆ ಮನೆಯಲ್ಲಿದ್ದ ವಿನಾಯಕನನ್ನು ಮನ ಬಂದಂತೆ ಚಾಕು ಹಾಗೂ ತಲ್ವಾರ್ನಿಂದ ಕಡಿದು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಆತನ ಪತ್ನಿ ಕೂಡ ಇದ್ದು ಅವರಿಗೂ ತಲೆಗೆ ಹೊಡೆಯಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಂಗಳದಲ್ಲಿ ಚಾಕು ಹಾಗೂ ರಾಡ್ ಬಿದ್ದಿದ್ದು, ತನಿಖೆಯ ಬಳಿಕವೇ ನಿಜಾಂಶ ಹೊರಬರಬೇಕಿದೆ. ಸದ್ಯ ವಿನಾಯಕ ಅವರ ಪತ್ನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳಿಂದ ಹಣಕೋಣ ಗ್ರಾಮದಲ್ಲಿ ಉದ್ಯಮಿ ಕುಟುಂಬ ಉಳಿದುಕೊಂಡಿತ್ತು. ಗ್ರಾಮದ ಸಾತೇರಿದೇವಿ ಜಾತ್ರೆಗೆಂದು ಪತ್ನಿಯೊಂದಿಗೆ ಉದ್ಯಮಿ ವಿನಾಯಕ ಊರಿಗೆ ಬಂದಿದ್ದರು. ಜಾತ್ರೆ ಮುಗಿಸಿ ಭಾನುವಾರ ಬೆಳಗ್ಗೆ ಪುಣೆಗೆ ವಾಪಸ್ಸಾಗಲು ಸಿದ್ಧವಾಗಿದ್ದರು. ಉದ್ಯಮಿ ವಿನಾಯಕ ನಾಯ್ಕ ಕಾರಿನಲ್ಲಿ ಬ್ಯಾಗ್ ಇರಿಸಲು ಬಾಗಿಲು ತೆರೆದಿದ್ದರು. ಈ ವೇಳೆ ಏಕಾಏಕಿ ರಾಡ್ನಿಂದ ಹಲ್ಲೆ ನಡೆಸಿ ಐವರು ಆಗಂತುಕರು ಒಳನುಗ್ಗಿದ್ದರು.
ರಾಡ್ ಸೇರಿ ಮಾರಕಾಸ್ತ್ರಗಳಿಂದ ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಉದ್ಯಮಿ ವಿನಾಯಕ ಭುಜಕ್ಕೆ ತೀವ್ರ ಹಲ್ಲೆ ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ತಪ್ಪಿಸಲು ಅಡ್ಡಬಂದ ಪತ್ನಿ ವೃಷಾಲಿ ಮೇಲೂ ಹಲ್ಲೆ ಮಾಡಿದ್ದಾರೆ. ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ 5:30 ರಿಂದ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಪೂಣಾದಲ್ಲಿ ಆಮದು ರಫ್ತು ಉದ್ಯಮ ನಡೆಸುತ್ತಿದ್ದರು. ತನಿಖೆ ಬಳಿಕ ಹಲ್ಲೆಗೆ ನಿಖರ ಕಾರಣ ತಿಳಿದುಬರಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಹತ್ಯೆ, ಹತ್ಯೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಉತ್ತರಕನ್ನಡ ಎಸ್ಪಿ ಎಂ.ನಾರಾಯಣ ತಿಳಿಸಿದರು.
Karwar Pune based businessman brutal murder, wife too attacked. The deceased has been identified as Raju Naik. He had come to Karwar to attend som religious program in the temple.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm