ಬ್ರೇಕಿಂಗ್ ನ್ಯೂಸ್
10-12-20 02:13 pm Mangalore Correspondent ಕ್ರೈಂ
ಮಂಗಳೂರು, ಡಿ.10: ಪ್ರಚೋದನಾತ್ಮಕ ಗೋಡೆ ಬರಹ ಬರೆದು ಸಿಕ್ಕಿಬಿದ್ದ ಇಬ್ಬರಿಗೆ ನ್ಯಾಯಾಲಯ ಮತ್ತೆ ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದೆ. ಕೊರೊನಾ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದ ಬಳಿಕ ಬುಧವಾರ ಸಂಜೆ ಅವರನ್ನು ಜೆಎಂಎಫ್ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಪೊಲೀಸರು ಮತ್ತಷ್ಟು ವಿಚಾರಣೆ ಅಗತ್ಯವಿದೆ ಎಂದು ಹೇಳಿದ ಕಾರಣ ಕೋರ್ಟ್ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಿದೆ.
ತೀರ್ಥಹಳ್ಳಿ ಮೂಲದ ಮೊಹಮ್ಮದ್ ಶಾರೀಕ್ ಮತ್ತು ಮಾಝ್ ಮುನೀರ್ ಅಹ್ಮದ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿ ಕಳೆದ ಶನಿವಾರ ಪೊಲೀಸರು ಬಂಧಿಸಿದ್ದರು. ಇಬ್ಬರು ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿನ ಡಾಟಾಗಳನ್ನು ರಿಟ್ರೀವ್ ಮಾಡಲು ತಜ್ಞರು ಪ್ರಯತ್ನಿಸುತ್ತಿದ್ದಾರೆ. ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿರುವ ಮಾಹಿತಿಗಳು ಹೊರಬಿದ್ದರೆ ತನಿಖೆಗೆ ಸಹಕಾರಿಯಾಗಲಿದೆ.


ಆರೋಪಿಗಳ ಪೈಕಿ, ಮೊಹಮ್ಮದ್ ಶಾರೀಕ್ ವಿದೇಶದಿಂದ ಕರೆ ಮಾಡಿದಾತನ ಸೂಚನೆಯಂತೆ ಈ ಕೃತ್ಯ ಮಾಡಿದ್ದ. ಹೇಗೆ ಬರೆಯಬೇಕು ಎನ್ನುವುದನ್ನೂ ವಿದೇಶಿ ವ್ಯಕ್ತಿಯೇ ಸೂಚಿಸಿದ್ದ. ಇಂಟರ್ನೆಟ್ ಮತ್ತು ವಾಟ್ಸಪ್ ಕರೆಗಳ ಮೂಲಕ ಶಾರೀಕ್ ಜೊತೆಗೆ ಒಡನಾಟ ಇಟ್ಟುಕೊಂಡಿದ್ದ. ಶಾರೀಕ್, ಉಗ್ರರ ಪರ ಒಲವುಳ್ಳ ವಾಟ್ಸಪ್ ಗ್ರೂಪ್ ಗಳಲ್ಲಿ ಆಕ್ಟಿವ್ ಆಗಿದ್ದ. ಇವೆಲ್ಲ ವಿಚಾರವನ್ನು ಪೊಲೀಸರು ದೃಢಪಡಿಸಲು ಆತನ ಮೊಬೈಲ್ ಮಾಹಿತಿಗಳನ್ನು ರಿಟ್ರೀವ್ ಮಾಡಲೇಬೇಕು.
ಇದೇ ವೇಳೆ, ಮೊಹಮ್ಮದ್ ಶಾರೀಕ್ ಸಂಬಂಧಿಯಾಗಿರುವ ತೀರ್ಥಹಳ್ಳಿ ಮೂಲದ ಸಾದತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ವಿಚಾರಣೆ ಸಂದರ್ಭ ಸಂಭಾವಿತರಂತೆ ಪೋಸು ನೀಡುತ್ತಿದ್ದಾರೆ. ಅವರ ಹಿನ್ನೆಲೆ ಬಗ್ಗೆ ಕೇಳಿದರೆ, ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿಲ್ಲ. ಆದರೆ, ಬಂಧಿತ ಇಬ್ಬರು ಕೂಡ ಇಂಗ್ಲಿಷ್, ಹಿಂದಿ, ಕನ್ನಡ, ಉರ್ದು ಭಾಷೆಯಲ್ಲಿ ಹಿಡಿತ ಹೊಂದಿದ್ದು, ಆಧುನಿಕ ತಂತ್ರಜ್ಞಾನದ ಮಾಹಿತಿ ಹೊಂದಿದ್ದಾರೆ. ಹೀಗಾಗಿ ಇವರ ಹಿಂದೆ ಪ್ರಬಲ ಸಂಚು ಇರುವ ಬಗ್ಗೆ ಗುಮಾನಿಯಿದ್ದು, ಪೊಲೀಸರು ಸಮಗ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.
In connection with the pro-graffiti slogans which appeared at two places in the city, the two persons who were arrested in the case, were remanded to ten days of police custody.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm