ಬ್ರೇಕಿಂಗ್ ನ್ಯೂಸ್
22-09-24 10:40 pm Mangalore Correspondent ಕ್ರೈಂ
ಮಂಗಳೂರು, ಸೆ.22: ಮಹಿಳೆಯೊಬ್ಬರು ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹಣ ಹೂಡಿಕೆ ಮಾಡಿ 28 ಲಕ್ಷ ರೂಪಾಯಿ ಕಳಕೊಂಡಿದ್ದು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಜುಲೈ 21ರಂದು ಮಹಿಳೆಗೆ ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಉದ್ಯೋಗದ ಬಗ್ಗೆ ಮೆಸೇಜ್ ಬಂದಿತ್ತು. ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ಮೋಸಗಾರರು ಸೂಚನೆ ನೀಡಿದ್ದರು. ಅದರಂತೆ, ಏಪ್ ನಲ್ಲಿ ವಿಡಿಯೋ ಲಿಂಕ್ ಷೇರ್ ಮಾಡಿದ್ದು, ಉದ್ಯೋಗದ ಬಗ್ಗೆ ಮಾಹಿತಿ ನೀಡಲು 123 ರೂ. ಪಾವತಿ ಮಾಡುವಂತೆ ಹೇಳಿದ್ದರು. ಆನಂತರ, ವಿಡಿಯೋ ಒಂದನ್ನು ಕಳಿಸಿದ್ದು, ಅದನ್ನು ನೋಡಿ ಸ್ಕ್ರೀನ್ ಶಾಟ್ ಶೇರ್ ಮಾಡುವಂತೆ ಕೇಳಿಕೊಂಡಿದ್ದರು. ಮತ್ತೆ 130 ರೂ. ಕಳಿಸುವುದಕ್ಕೆ ಹೇಳಿದ್ದು ಹಾಗೆಯೇ ಮಹಿಳೆ ಅನುಸರಿಸಿದ್ದರು.
ಜುಲೈ 23ರಂದು ಮತ್ತೊಂದು ಲಿಂಕ್ ಕಳಿಸಿದ್ದು, ಮತ್ತೆ ಒಂದು ಸಾವಿರ ರೂ. ಪಾವತಿಸುವಂತೆ ಹೇಳಿದ್ದರು. ಮಹಿಳೆ ಒಂದು ಸಾವಿರ ಪಾವತಿಸಿದ್ದು, ಅವರು ಹೇಳಿದ ಹಾಗೇ ಮಾಡಿದ್ದಕ್ಕಾಗಿ ಈಕೆಗೆ 1300 ರೂ. ಕಳಿಸಿಕೊಟ್ಟು ನಂಬಿಕೆ ಬರುವಂತೆ ಮಾಡಿದ್ದರು.
ಆನಂತರ, ಮತ್ತಷ್ಟು ಲಿಂಕ್ ಗಳನ್ನು ಕಳಿಸಿಕೊಟ್ಟು ವಿಶ್ವಾಸ ಹುಟ್ಟಿಸಿದ್ದರು. ಇದೇ ನಂಬಿಕೆಯಿಂದ ಮಹಿಳೆ 2.85 ಲಕ್ಷ ರೂ.ವನ್ನು ಅವರು ನೀಡಿದ್ದ ಖಾತೆಗೆ ಕಳಿಸಿಕೊಟ್ಟಿದ್ದಾರೆ. ಇನ್ನೊಂದು ಖಾತೆಗೆ 25.32 ಲಕ್ಷ ರೂ.ವನ್ನು ರವಾನೆ ಮಾಡಿದ್ದಾರೆ. ವಂಚಕರು 28.18 ಲಕ್ಷ ರೂ.ಗೆ ಪ್ರತಿಯಾಗಿ ದೊಡ್ಡ ಮೊತ್ತದ ಲಾಭಾಂಶವನ್ನು ನೀಡುವುದಾಗಿ ನಂಬಿಸಿದ್ದರು. ಹಣ ಹಿಂತಿರುಗಿ ಬರುತ್ತೆ ಎಂಬ ನಂಬಿಕೆಯಿಂದ ಮನೆಯಲ್ಲಿ ಯಾರಿಗೂ ಹೇಳದೆ ಮಹಿಳೆ ಕೆಲವು ದಿನಗಳನ್ನು ಕಳೆದಿದ್ದಾರೆ. ಆದರೆ ವಂಚಕರು ಸಂಪರ್ಕವನ್ನು ಕಡಿದುಕೊಂಡಿದ್ದು, ಮಹಿಳೆಗೆ ಪಂಗನಾಮ ಹಾಕಿದ್ದಾರೆ. ಆನಂತರ, ಹಣ ಕಳಕೊಂಡ ಬಗ್ಗೆ ಮನೆಯವರಲ್ಲಿ ಹೇಳಿಕೊಂಡಿದ್ದು ಕೊಣಾಜೆ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.
A woman was allegedly duped of Rs 28.18 lakh in a part-time job scam here, said the police on Sunday. In a complaint to Konaje police, the victim of the job fraud scam said that she received a WhatsApp message offering her a part-time job on July 21. She was asked to download the Telegram app, where she received a link from the fraudsters.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm