ಬ್ರೇಕಿಂಗ್ ನ್ಯೂಸ್
23-09-24 09:12 pm Bangalore Correspondent ಕ್ರೈಂ
ಬೆಂಗಳೂರು, ಸೆ.23: ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ (41) ಹಾಗೂ ಬೆಂಗಳೂರಿನ ಸಹನಾ ದಾಸ್ (25) ಬಂಧಿತ ಆರೋಪಿಗಳು.
ಬಂಧಿತರಿಂದ ಬರೋಬ್ಬರಿ 1.50 ಕೋಟಿ ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಜುಲೈ 24ರಂದು ನೈಜೀರಿಯಾ ಮೂಲದ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್ ಎಂಬಾತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನಿಂದ 4 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ಗಳನ್ನ ವಶಪಡಿಸಿಕೊಂಡಿದ್ದರು. ತನಿಖಾ ಕಾಲದಲ್ಲಿ ಈ ಆರೋಪಿಯು ಮಿಖಾಯಿಲ್ ಡೈಕೆ ಒಕೋಲಿಯಿಂದ ಎಂಡಿಎಂಎ ಖರೀದಿಸಿದ್ದಾಗಿ ಹೆಸರನ್ನಷ್ಟೇ ತಿಳಿಸಿದ್ದ. ಆರೋಪಿಯ ಪತ್ತೆಕಾರ್ಯ ಮುಂದುವರೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.
ಈ ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ಬಳಿಕ ಇಬ್ಬರು ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
25 year old girl arrested with African drug peddler in Bangalore by CCB police, 1.50 crore MDMA seized.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm