ಬ್ರೇಕಿಂಗ್ ನ್ಯೂಸ್
01-10-24 11:18 pm Mangalore Correspondent ಕ್ರೈಂ
ಮಂಗಳೂರು, ಅ.1: ನೀವು ಕಳಿಸಿದ್ದ ಪಾರ್ಸೇಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರಿಂದ 39.30 ಲಕ್ಷ ರೂ. ಕಿತ್ತುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ 23 ರಂದು ತನ್ನ ಮೊಬೈಲ್ಗೆ ಕರೆ ಬಂದಿದ್ದು ಡಿಎಚ್ಎಲ್ ಕೊರಿಯರ್ ಸಂಸ್ಥೆಯ ಕಚೇರಿಯಿಂದ ಶ್ರೇಯಾ ಶರ್ಮಾ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದರು. ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ್ದ ಪಾರ್ಸೆಲ್ ರವಾನೆಯಾಗದೇ ಕಚೇರಿಯಲ್ಲೇ ಉಳಿದಿದೆ. ಅದರಲ್ಲಿ 5 ಪಾಸ್ಪೋರ್ಟ್, ಒಂದು ಲ್ಯಾಪ್ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ ಹಾಗೂ ಕೆಲವು ಬ್ಯಾಂಕ್ ದಾಖಲೆಗಳು ಹಾಗೂ ಮೂರೂವರೆ ಕೆ.ಜಿ. ಬಟ್ಟೆ ಇದೆ ಎಂದು ಆಕೆ ತಿಳಿಸಿದ್ದರು. ಆ ಪಾರ್ಸೆಲ್ ತನ್ನದಲ್ಲ ಎಂದರೂ ಕೇಳಲಿಲ್ಲ.
ಕಸ್ಟಮ್ಸ್ ಅಧಿಕಾರಿಗಳು ನಿಮ್ಮನ್ನು ಬಂಧಿಸುತ್ತಾರೆ ಎಂದು ಹೇಳಿ ಯಾಮಾರಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.24ರಂದು ಬೆಳಗ್ಗೆ 9ರಿಂದ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ ಕಸ್ಟಮ್ಸ್ ಸೋಗಿನಲ್ಲಿದ್ದ ಅಪರಿಚಿತರು, ನನ್ನನ್ನು ಯಾರ ಜೊತೆಗೂ ಮಾತನಾಡದಂತೆ (ಡಿಜಿಟಲ್ ಅರೆಸ್ಟ್) ನಿರ್ಬಂಧಿಸಿದ್ದರು. ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಬಂಧನ ಮಾಡಬೇಕಾಗುತ್ತದೆ. ಅಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿದೆ ಎಂದಿದ್ದರು. ಬಂಧನ ಮಾಡದೇ ಇರಬೇಕಾದರೆ ನಾವು ಕೇಳಿದಷ್ಟು ಹಣ ನೀಡುವಂತೆ ಕೇಳಿದ್ದರು. ಮೊದಲು ರು. 37 ಲಕ್ಷ ಪಾವತಿಸಿದ್ದು ಮರುದಿನ ನನ್ನ ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಒಬ್ಬರು ನಡೆಸುತ್ತಾರೆ ಎಂದು ನಂಬಿಸಿ ಅದಕ್ಕೂ ರೂ. 2.30 ಲಕ್ಷವನ್ನು ಪಡೆದಿದ್ದಾರೆ.
ವಿಚಾರಣೆ ಪೂರ್ಣಗೊಂಡ ಬಳಿಕ ಪಡೆದ ಅಷ್ಟೂ ಹಣವನ್ನು ಸೆ.28 ರಂದು ಮರಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿಲ್ಲ. ನನಗೆ ಅಪರಿಚಿತರ ಮೋಸ ಮಾಡಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರು ನೀಡಿದ್ದಾರೆ.
Digital arrest scam in the name of drugs parcel, Mangalore man looses 39 lakhs rs.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am