ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm