ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
03-10-24 05:01 pm
Bangalore Correspondent
ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಜೆಡಿಎಸ್ ನಾಯಕ...
03-10-24 03:36 pm
Mysuru Dasara 2024, Prathap simha: ಮೈಸೂರು ದಸರ...
03-10-24 02:52 pm
Mysuru Dasara 2024: ವಿಶ್ವವಿಖ್ಯಾತ ಮೈಸೂರು ದಸರಾಗ...
03-10-24 01:25 pm
ಮುಡಾ ಪ್ರಕರಣ ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ;...
03-10-24 12:00 pm
02-10-24 02:10 pm
HK News Desk
Israel-Iran war: ಇಸ್ರೇಲ್ ಮೇಲೆ ಮುಗಿಬಿದ್ದ ಇರಾನ್...
02-10-24 11:43 am
Fire in Thailand: ಥಾಯ್ಲೆಂಡ್ ; ಸ್ಕೂಲ್ ಬಸ್ ಟಯರ...
01-10-24 07:36 pm
Sadhguru, Madras High Court: ಹೆಣ್ಣು ಮಕ್ಕಳಿಗೆ...
01-10-24 03:09 pm
500 ರೂ. ನೋಟಿನಲ್ಲಿ ಗಾಂಧೀಜಿ ಬದಲು ನಟ ಅನುಪಮ್ ಖೇರ್...
30-09-24 11:03 pm
03-10-24 05:50 pm
Mangalore Correspondent
Mangalore Kishor kumar Puttur, Raju Poojary:...
03-10-24 05:13 pm
Beltangady Accident, Mangalore: ಬೆಳ್ತಂಗಡಿ ; ತ...
03-10-24 02:20 pm
Mangalore, Brijesh Chowta MP: ವಾಲ್ಮೀಕಿ ಹಗರಣ ರ...
02-10-24 11:04 pm
Raju poojari, vidhana parishad, Mangalore: ದಕ...
02-10-24 10:06 pm
02-10-24 05:44 pm
Bangalore Correspondent
CCB Mangalore Police, Drugs: ತಲಪಾಡಿ ಗಡಿಭಾಗದಲ್...
02-10-24 04:45 pm
Vardhman Group, Digital Arrest, Fraud; ವರ್ಧಮಾ...
02-10-24 04:03 pm
Cyber fraud, Mangalore crime: ಪಾರ್ಸೇಲ್ ನಲ್ಲಿ...
01-10-24 11:18 pm
Muneer Goods Muneer, Fraud, Mangalore: ಶೋಕಿಲಾ...
01-10-24 10:00 pm