ಬ್ರೇಕಿಂಗ್ ನ್ಯೂಸ್
10-12-20 10:46 pm Mantesh: Mysore Reporter ಕ್ರೈಂ
ಮೈಸೂರು, ಡಿ.10: ಕಾನೂನು ಪಾಲಿಸಿ, ಜನರಿಗೆ ಕಾನೂನಿನ ಪಾಠ ಹೇಳುವ ಪೊಲೀಸ್ ಅಧಿಕಾರಿಗಳೇ ಪ್ರೇಮ ಮತ್ತು ಕಾಮದಾಟ ಹೆಸರಲ್ಲಿ ಈಗ ಖಾಕಿಯ ಮರ್ಯಾದೆ ತೆಗೆಯುತ್ತಿರುವ ಪ್ರಸಂಗ ಬೆಳಕಿಗೆ ಬಂದಿದೆ. ನೊಂದವರಿಗೆ ನ್ಯಾಯ ಒದಗಿಸಬೇಕಾದ ಮಹಿಳಾ ಪೊಲೀಸ್ ಅಧಿಕಾರಿಯೇ ಈಗ ಸಂತ್ರಸ್ತೆಯಾಗಿ ಹಿರಿಯ ಅಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮೊರೆ ಹೋಗಿದ್ದಾಳೆ.
ಸಾರ್ವಜನಿಕರಿಗೆ ರಕ್ಷಣೆಗಾಗಿ ಖಾಕಿ ತೊಟ್ಟ ಅಧಿಕಾರಿಯಿಂದಲೇ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಅತ್ಯಾಚಾರ, ವಂಚನೆ, ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ. ಮೈಸೂರು ನಗರದ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ಆನಂದ್ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಈತ ತನ್ನ ಕರ್ತವ್ಯ ಮರೆತು, ಸ್ನೇಹಿತೆಯಾಗಿದ್ದ ವಿವಿ ಪುರಂ ಠಾಣೆಯ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಜೊತೆ ಪ್ರೇಮ್ ಕಹಾನಿ ಶುರು ಮಾಡಿಕೊಂಡಿದ್ದ. ಈ ಪ್ರೇಮ್ ಕಹಾನಿ ಲವ್ವಿ ಡವ್ವಿ ದೈಹಿಕ ಸಂಪರ್ಕದ ವರೆಗೂ ಬೆಳೆದು ಸ್ವಚ್ಚಂದ ಪ್ರೇಮಿಗಳಂತೆ ಮೈಸೂರು ತುಂಬಾ ವಿಹರಿಸಿದ್ದಾರೆ.

ಆದರೆ, ಮದುವೆ ವಿಚಾರ ಬರುವ ಮುನ್ನವೇ ಮಹಿಳಾ ಅಧಿಕಾರಿ ಗರ್ಭಿಣಿಯಾಗಿದ್ದಳು. ಯುವತಿ ಗರ್ಭಿಣಿಯಾಗಿ ಯಾವಾಗ ಮದುವೆ ಪ್ರಸ್ತಾಪ ಎತ್ತುತ್ತಿದ್ಲೋ ಪ್ರೇಯಸಿ ಅಧಿಕಾರಿಯನ್ನ ಆನಂದ್ ದೂರವಿಡಲು ಶುರು ಮಾಡಿದ್ದಾನೆ. ಅಲ್ಲದೆ, ಗರ್ಭಪಾತ ಮಾಡಿಸಿಕೊಳ್ಳುವಂತೆ ಬೆದರಿಕೆಯನ್ನೂ ಹಾಕಿದ್ದಾನೆ. ಒಪ್ಪದಿದ್ದಾಗ ಹಾರ್ಲಿಕ್ಸ್, ಡ್ರೈಫ್ರೂಟ್ಸ್ನಲ್ಲಿ ಮಾತ್ರೆಗಳನ್ನ ಹಾಕಿ ಬಲವಂತವಾಗಿ ಅಬಾರ್ಷನ್ ಮಾಡಿಸಿದ್ದಾನೆ. ಹೀಗೆಂದು ನೊಂದ ಮಹಿಳಾ ಅಧಿಕಾರಿ ಮೈಸೂರಿನ ವಿಜಯನಗರ ಠಾಣೆಗೆ ದೂರು ನೀಡಿ ನ್ಯಾಯ ಕೇಳಿದ್ದಾರೆ.

ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ಐಪಿಸಿ ಸೆಕ್ಷನ್ 306, 406, 313, 354, 417, 504, 506 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ ನಡುವೆ ಆನಂದ್, ಬೇರೊಂದು ಯುವತಿಯ ಜೊತೆ ಮದುವೆಗೆ ಸಿದ್ದತೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಆನಂದ್ ವಿರುದ್ಧ ಕೊಲೆ ಬೆದರಿಕೆ, ವಂಚನೆ, ಅತ್ಯಾಚಾರದ ಗಂಭೀರ ಆರೋಪ ಮಾಡುತ್ತಿರುವ ಮಹಿಳಾ ಎಸ್ಐ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ.
ಯುವ ಪೊಲೀಸ್ ಅಧಿಕಾರಿಗಳಿಬ್ಬರ ಪ್ರೇಮದಾಟ ಮೈಸೂರಿನಲ್ಲಿ ಪೊಲೀಸ್ ಇಲಾಖೆಯ ಘನತೆ, ಗೌರವಕ್ಕೆ ಮಸಿ ಬಳಿದಿದೆ. ಪ್ರಕರಣ ಸಂಬಂಧ ಸತ್ಯಾಸತ್ಯತೆಗಳನ್ನ ಅರಿಯಲು ಹಿರಿಯ ಅಧಿಕಾರಿಗಳೇ ಮಧ್ಯ ಪ್ರವೇಶಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Mysore N R Nagar Police sub-inspector Anand alleged of love sex and dhoka to V V Puram Police station woman Sub Inspector. A case has been registered aginst Anand at Vijayanagar Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm