ಬ್ರೇಕಿಂಗ್ ನ್ಯೂಸ್
05-10-24 08:26 pm Mangalore Correspondent ಕ್ರೈಂ
ಮಂಗಳೂರು, ಅ.5: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ವಿರೋಧಿಸಿ ಹೋರಾಟಕ್ಕೆ ನೇತೃತ್ವ ನೀಡಿದ್ದ ಕೆಥೋಲಿಕ್ ಸಭಾ ಮುಖಂಡ ಆಲ್ವಿನ್ ಡಿಸೋಜ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಆಲ್ವಿನ್ ಡಿಸೋಜ ಅವರು ಯೂಟ್ಯೂಬ್ ಚಾನೆಲ್ಲಿನ ಪತ್ರಕರ್ತರೊಬ್ಬರನ್ನು ಕರೆತಂದು ಅಕ್ರಮ ಮರಳುಗಾರಿಕೆ ಬಗ್ಗೆ ಕವರೇಜ್ ಮಾಡಿಸುತ್ತಿದ್ದರು. ದ್ವೀಪದ ಆಸುಪಾಸಿನಲ್ಲಿ ವಿಡಿಯೋ ಮಾಡಿದ ಬಳಿಕ ಇವರು ಹಿಂತಿರುಗುತ್ತಿದ್ದಾಗ ರಸ್ತೆ ಬದಿಯಲ್ಲಿ ಅಡ್ಡ ಹಾಕಿದ ತಂಡವೊಂದು ಆಲ್ವಿನ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯಿಂದ ಗಾಯಗೊಂಡ ಆಲ್ವಿನ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಆಲ್ವಿನ್ ಡಿಸೋಜ ಮೇಲೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರೇ ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆಲ್ವಿನ್ ಕೂಡ ಬೇರೆ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಪಾವೂರು ಉಳಿಯದಲ್ಲಿ ಮರಳುಗಾರಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವುದಕ್ಕೆ ಅಲ್ಲಿನ ದಂಧೆಕೋರರು ಆಕ್ಷೇಪಿಸಿದ್ದಾರೆ. ನೀನು ಬೇರೆ ಕಡೆ ಮಾಡ್ತೀಯಲ್ಲಾ.. ಇಲ್ಲಿ ಯಾಕೆ ವಿರೋಧ ಮಾಡ್ತೀಯಾ ಎಂದು ಪ್ರಶ್ನೆ ಮಾಡಿ ಹಲ್ಲೆ ನಡೆಸಿದ್ದಾರೆ. ಒಂದು ದಿನದ ಹಿಂದೆ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬೋಟುಗಳನ್ನು ಗಣಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು.
ಪಾವೂರು ಉಳಿಯ ದ್ವೀಪದ ಸುತ್ತ ಮಣ್ಣನ್ನು ಅಗೆದು ಮರಳುಗಾರಿಕೆ ನಡೆಸಲಾಗುತ್ತಿದ್ದು ಇದರಿಂದ ದ್ವೀಪದ ಅಸ್ತಿತ್ವಕ್ಕೆ ತೊಂದರೆಯಾಗಿದೆ. ದ್ವೀಪದ ವ್ಯಾಪ್ತಿ ಕಿರಿದಾಗಿದ್ದು ಇದನ್ನು ವಿರೋಧಿಸಿ ಕೆಥೋಲಿಕ್ ಸಭಾದಿಂದ ಇತ್ತೀಚೆಗೆ ಬೃಹತ್ ಪ್ರತಿಭಟನೆ ನಡೆದಿತ್ತು. ದ್ವೀಪದಲ್ಲಿ 40ರಷ್ಟು ಕ್ರಿಸ್ತಿಯನ್ ಕುಟುಂಬಗಳು ವಾಸವಿದ್ದು ಇವರ ಗೋಳು ಅರಣ್ಯ ರೋದನವಾಗಿದೆ.
Mangalore Alwyn DSouza president of Catholic Sabha attacked thrashed by illegal sand goons for taking youtube journalist to film the illegal sand mining at Pavoor uliya. Alwyn DSouza was beaten near Adyar by miscreants. A case has been registered at the Kankandy rural police station.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm