ಬ್ರೇಕಿಂಗ್ ನ್ಯೂಸ್
05-10-24 08:26 pm Mangalore Correspondent ಕ್ರೈಂ
ಮಂಗಳೂರು, ಅ.5: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ವಿರೋಧಿಸಿ ಹೋರಾಟಕ್ಕೆ ನೇತೃತ್ವ ನೀಡಿದ್ದ ಕೆಥೋಲಿಕ್ ಸಭಾ ಮುಖಂಡ ಆಲ್ವಿನ್ ಡಿಸೋಜ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಆಲ್ವಿನ್ ಡಿಸೋಜ ಅವರು ಯೂಟ್ಯೂಬ್ ಚಾನೆಲ್ಲಿನ ಪತ್ರಕರ್ತರೊಬ್ಬರನ್ನು ಕರೆತಂದು ಅಕ್ರಮ ಮರಳುಗಾರಿಕೆ ಬಗ್ಗೆ ಕವರೇಜ್ ಮಾಡಿಸುತ್ತಿದ್ದರು. ದ್ವೀಪದ ಆಸುಪಾಸಿನಲ್ಲಿ ವಿಡಿಯೋ ಮಾಡಿದ ಬಳಿಕ ಇವರು ಹಿಂತಿರುಗುತ್ತಿದ್ದಾಗ ರಸ್ತೆ ಬದಿಯಲ್ಲಿ ಅಡ್ಡ ಹಾಕಿದ ತಂಡವೊಂದು ಆಲ್ವಿನ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯಿಂದ ಗಾಯಗೊಂಡ ಆಲ್ವಿನ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.



ಆಲ್ವಿನ್ ಡಿಸೋಜ ಮೇಲೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರೇ ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆಲ್ವಿನ್ ಕೂಡ ಬೇರೆ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಪಾವೂರು ಉಳಿಯದಲ್ಲಿ ಮರಳುಗಾರಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವುದಕ್ಕೆ ಅಲ್ಲಿನ ದಂಧೆಕೋರರು ಆಕ್ಷೇಪಿಸಿದ್ದಾರೆ. ನೀನು ಬೇರೆ ಕಡೆ ಮಾಡ್ತೀಯಲ್ಲಾ.. ಇಲ್ಲಿ ಯಾಕೆ ವಿರೋಧ ಮಾಡ್ತೀಯಾ ಎಂದು ಪ್ರಶ್ನೆ ಮಾಡಿ ಹಲ್ಲೆ ನಡೆಸಿದ್ದಾರೆ. ಒಂದು ದಿನದ ಹಿಂದೆ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬೋಟುಗಳನ್ನು ಗಣಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು.
ಪಾವೂರು ಉಳಿಯ ದ್ವೀಪದ ಸುತ್ತ ಮಣ್ಣನ್ನು ಅಗೆದು ಮರಳುಗಾರಿಕೆ ನಡೆಸಲಾಗುತ್ತಿದ್ದು ಇದರಿಂದ ದ್ವೀಪದ ಅಸ್ತಿತ್ವಕ್ಕೆ ತೊಂದರೆಯಾಗಿದೆ. ದ್ವೀಪದ ವ್ಯಾಪ್ತಿ ಕಿರಿದಾಗಿದ್ದು ಇದನ್ನು ವಿರೋಧಿಸಿ ಕೆಥೋಲಿಕ್ ಸಭಾದಿಂದ ಇತ್ತೀಚೆಗೆ ಬೃಹತ್ ಪ್ರತಿಭಟನೆ ನಡೆದಿತ್ತು. ದ್ವೀಪದಲ್ಲಿ 40ರಷ್ಟು ಕ್ರಿಸ್ತಿಯನ್ ಕುಟುಂಬಗಳು ವಾಸವಿದ್ದು ಇವರ ಗೋಳು ಅರಣ್ಯ ರೋದನವಾಗಿದೆ.
Mangalore Alwyn DSouza president of Catholic Sabha attacked thrashed by illegal sand goons for taking youtube journalist to film the illegal sand mining at Pavoor uliya. Alwyn DSouza was beaten near Adyar by miscreants. A case has been registered at the Kankandy rural police station.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm