Mangalore, Murder, crime: ಬಸ್ ನಿಲ್ದಾಣದಲ್ಲಿ ಕಂಡಕ್ಟರ್ ಕೊಲೆ ಶಂಕೆ, ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು

15-10-24 09:49 pm       Mangalore Correspondent   ಕ್ರೈಂ

ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತಲೆಗೆ ಹೊಡೆದು ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು, ಅ.15: ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತಲೆಗೆ ಹೊಡೆದು ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜ್ಪೆ ನಿವಾಸಿ ರಾಜೇಶ್ (31) ಮೃತ ವ್ಯಕ್ತಿ. ಈತ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ತೊಳೆಯುವುದು, ಕೆಲವೊಮ್ಮೆ ಕಂಡಕ್ಟರ್ ಆಗಿಯೂ ಕೆಲಸ ಮಾಡುತ್ತಿದ್ದ. ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಶವವಾಗಿ ಪತ್ತೆಯಾಗಿದ್ದಾನೆ. ಕಿವಿಯಲ್ಲಿ ರಕ್ತ ಬರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಸೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಮಾರ್ಟಂ ನಡೆಸಲಾಗಿದೆ. ವರದಿ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Mangalore Bus conductor body found near state bank, Murder suspected. The deceased has been identified as Rajesh from Bajpe. Pandeshwar police are now investigating the case.