ಬ್ರೇಕಿಂಗ್ ನ್ಯೂಸ್
19-10-24 02:38 pm HK News Desk ಕ್ರೈಂ
ಬೆಳಗಾವಿ, ಅ 19: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನದ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ ಮಾಡಿದ್ದಾರೆ. ಸಾಂಗ್ಲಿ ಪಟ್ಟಣದ ಸಚಿನ ಮೇನಕುದುಳೆ ಹಾಗೂ ಮಾರುತಿ ಮಾರಗುಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.



ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನ್ಅನ್ನೇ ಮಾಡಿಫೈ ಮಾಡಿಕೊಂಡಿದ್ದರು. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಾಹನವನ್ನು ಮಹಾರಾಷ್ಟ್ರದ ಸಾಂಗಲಿ ನಗರದಿಂದ ಹುಬ್ಬಳ್ಳಿ ಕಡೆಗೆ ಸಾಗಿಸಲಾಗುತ್ತಿತ್ತು ಎಂದು ಬಂಧಿತರು ಬಾಯಿ ಬಿಟ್ಟಿದ್ದಾರೆ. ವಾಹನ ಚಾಲಕ ಸಾಂಗಲಿಯ ಸಚಿನ್ ಮೇಬಕುದಳಿ, ಕ್ಲೀನರ್ ಮಾರುತಿ ಮಾರಗುಡೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣಾಧಿಕಾರಿಗಳು ಹದ್ದಿನ ಕಣ್ಣುಗಳನ್ನು ಇಟ್ಟಿದ್ದಾರೆ. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಬೆಳಗಾವಿಯಲ್ಲಿ 2.73 ಕೋಟಿ ಸೀಜ್ ಆಗಿದ್ದು,ಹಲವು ಅನುಮಾನಗಳಿಗೆ ಕಾರಣವಾಗಿದೆ.
City Crime Branch police seized cash of Rs 2,73,27,500 that was being transported illegally without documents. The cash was hidden under modified cabin of a goods truck while being transported from Sangli to Hubballi on the Pune-Bengaluru national highway.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm