ಬ್ರೇಕಿಂಗ್ ನ್ಯೂಸ್
12-12-20 10:57 am Mangalore Correspondent ಕ್ರೈಂ
ಬಂಟ್ವಾಳ, ಡಿ.12 : ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಮಕ್ಕಳ ಕತ್ತಿನಿಂದ ಚಿನ್ನಾಭರಣ ಲಪಟಾಯಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪದಲ್ಲಿ ಫಾತಿಮಾ ಶಹನಾಝ್ ಎಂಬಾಕೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಬಿ.ಸಿ.ರೋಡಿನ ಹಾಲ್ ಮಾಲೀಕರೊಬ್ಬರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು. ಎರಡು ದಿನಗಳ ಹಿಂದೆ ಪಾಣೆಮಂಗಳೂರಿನ ಆಡಿಟೋರಿಯಂ ಒಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹೆಣ್ಣು ಮಗುವನ್ನು ಪುಸಲಾಯಿಸಿ ಕತ್ತಿನಿಂದ ಚಿನ್ನದ ಸರ ಕಸಿಯಲು ಮಹಿಳೆಯೊಬ್ಬಳು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಕಡೆ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಾಳೆ.
ಕಳವುಗೈದ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿದ್ದ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಕ್ಕೆ ಪಡೆಯಲಾಗಿದೆ. ಉಳಿದಂತೆ ಒಂದಷ್ಟು ಚಿನ್ನ ಮಾರಿದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದು ತಿಳಿದು ಬಂದಿದೆ. 10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನ, ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ತಂಡ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Bantwal town police personnel have arrested a woman who is accused of stealing jewellery from the necks of the children and ornaments from women's handbags at wedding functions.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm