ಬ್ರೇಕಿಂಗ್ ನ್ಯೂಸ್
25-10-24 09:36 pm Mangalore Correspondent ಕ್ರೈಂ
ಮಂಗಳೂರು, ಅ.25: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ತ ಯುವತಿ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ ರಶೀದ್ ಎಂಬಾತ ಯುವತಿಗೆ ಕರೆ ಮಾಡಿ ಕುಶಾಲನಗರದ ಸೈಟ್ ಬಗ್ಗೆ ವಿವರಿಸಿ ಖರೀದಿಸಲು ತಿಳಿಸಿದ್ದ. ಯುವತಿ ಅಲ್ಲಿನ ಸ್ಥಳೀಯ ನಿವಾಸಿ ಆದ ಕಾರಣ ಜಾಗ ಖರೀದಿಸಲು ಒಲವು ತೋರಿದ್ದರು. ಉದ್ಯಮಿ ಜಾಗ ನೋಡಲು ತನ್ನ ಕಾರಿನಲ್ಲೇ ಬಾ, ನಾನೇ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದಾಗ ಯುವತಿ ಒಪ್ಪಿಕೊಂಡಿದ್ದರು. ಹಾಗೆಯೇ ರಾತ್ರಿ 8 ಗಂಟೆ ಸುಮಾರಿಗೆ ಕೊಡಗಿನ ವಿರಾಜಪೇಟೆ ತಲುಪಿದ್ದು ಯುವತಿ ಉಳಿದುಕೊಳ್ಳಲು ಹೋಟೆಲ್ ನಲ್ಲಿ ಎರಡು ರೂಂ ಬುಕ್ ಮಾಡಿದ್ದರು. ಇದನ್ನು ಪ್ರಶ್ನಿಸಿದ ರಶೀದ್ ಒಂದೇ ರೂಮ್ ನಲ್ಲಿ ಇರಬಹುದು ಅಲ್ವಾ.. ಎರಡು ರೂಮ್ ಯಾಕೆ ಬುಕ್ ಮಾಡಿದ್ದು ಎಂದು ಹೇಳಿದಾಗ ಭಯಗೊಂಡ ಯುವತಿ ಅಲ್ಲಿಂದ ತೆರಳಿ ಸಮೀಪದ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದರು.
ಮರುದಿನ ರಶೀದ್ ಕರೆ ಮಾಡಿ 12 ಗಂಟೆಗೆ ಸೈಟ್ ನೋಡಲು ಬಾ ಎಂದಿದ್ದಾನೆ. ನಿನ್ನೆ ಒಂದೇ ರೂಂ ನಲ್ಲಿ ಇರಬಹುದು ಇತ್ತು. ನಾನು ಏನೋ ನಿರೀಕ್ಷೆ ಮಾಡಿದ್ದೆ ಎಂದಾಗ ಯುವತಿ, ನೀವು ಹೀಗೆ ಮಾತಾನಾಡುವುದು ಸರೀ ಅಲ್ಲ. ನೀವು ವಯಸ್ಸಿನಲ್ಲಿ ನನ್ನ ತಂದೆ ಸಮಾನ ಎಂದಾಗ ತಪ್ಪಾಯಿತು ಎಂದು ಹೇಳಿದ್ದನು. ಮತ್ತೆ ಕಾರಿನಲ್ಲಿ ಸೈಟ್ ನೋಡಲು ತೆರಳಿದಾಗ, ದಾರಿ ಮಧ್ಯೆ ಕಾರು ನಿಲ್ಲಿಸಿ 1 ಲಕ್ಷ ನೋಟಿನ ಕಟ್ಟು ತೋರಿಸಿ ನನಗೆ ನೀನು ಬೇಕು, ನೀನು ನನ್ನ ಜೊತೆ ಸಹಕರಿಸಿದರೆ ಈ ಹಣ ನೀಡುತ್ತೇನೆ ಎಂದಾಗ ಯುವತಿ ವಿರೋಧಿಸಿದ್ದಾಳೆ. ಬಳಿಕವೂ ನೀನು ಸಹಕರಿಸಿದರೆ ಕುಶಾಲನಗರದಲ್ಲಿ ಇರುವ ತನ್ನ ಎರಡು ಫ್ಲಾಟ್ ಗಳನ್ನು ನಿನ್ನ ಹೆಸರಿಗೆ ಬರೆದು ಕೊಡುತ್ತೇನೆ ಎಂದು ಆಫರ್ ಮೇಲೆ ಆಫರ್ ಕೊಟ್ಟು ಯುವತಿಯ ಎದೆ, ಮೈಮೇಲೆ ಕೈ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿ ಬೊಬ್ಬೆ ಹಾಕಿ ಕಾರಿನಿಂದ ಇಳಿದು ತಪ್ಪಿಸಿಕೊಂಡಿದ್ದಾಳೆ.
ಇದೀಗ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾಗಿ ರಶೀದ್ ವಿರುದ್ಧ ದೂರು ನೀಡಿದ್ದಾರೆ. ರಶೀದ್ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದಾನೆ.
Mangalore builder booked over sexual harrasment case at pandeshwar police station. The builder has been identified as Rashid.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm