ಬ್ರೇಕಿಂಗ್ ನ್ಯೂಸ್
25-10-24 09:36 pm Mangalore Correspondent ಕ್ರೈಂ
ಮಂಗಳೂರು, ಅ.25: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ತ ಯುವತಿ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ ರಶೀದ್ ಎಂಬಾತ ಯುವತಿಗೆ ಕರೆ ಮಾಡಿ ಕುಶಾಲನಗರದ ಸೈಟ್ ಬಗ್ಗೆ ವಿವರಿಸಿ ಖರೀದಿಸಲು ತಿಳಿಸಿದ್ದ. ಯುವತಿ ಅಲ್ಲಿನ ಸ್ಥಳೀಯ ನಿವಾಸಿ ಆದ ಕಾರಣ ಜಾಗ ಖರೀದಿಸಲು ಒಲವು ತೋರಿದ್ದರು. ಉದ್ಯಮಿ ಜಾಗ ನೋಡಲು ತನ್ನ ಕಾರಿನಲ್ಲೇ ಬಾ, ನಾನೇ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದಾಗ ಯುವತಿ ಒಪ್ಪಿಕೊಂಡಿದ್ದರು. ಹಾಗೆಯೇ ರಾತ್ರಿ 8 ಗಂಟೆ ಸುಮಾರಿಗೆ ಕೊಡಗಿನ ವಿರಾಜಪೇಟೆ ತಲುಪಿದ್ದು ಯುವತಿ ಉಳಿದುಕೊಳ್ಳಲು ಹೋಟೆಲ್ ನಲ್ಲಿ ಎರಡು ರೂಂ ಬುಕ್ ಮಾಡಿದ್ದರು. ಇದನ್ನು ಪ್ರಶ್ನಿಸಿದ ರಶೀದ್ ಒಂದೇ ರೂಮ್ ನಲ್ಲಿ ಇರಬಹುದು ಅಲ್ವಾ.. ಎರಡು ರೂಮ್ ಯಾಕೆ ಬುಕ್ ಮಾಡಿದ್ದು ಎಂದು ಹೇಳಿದಾಗ ಭಯಗೊಂಡ ಯುವತಿ ಅಲ್ಲಿಂದ ತೆರಳಿ ಸಮೀಪದ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದರು.
ಮರುದಿನ ರಶೀದ್ ಕರೆ ಮಾಡಿ 12 ಗಂಟೆಗೆ ಸೈಟ್ ನೋಡಲು ಬಾ ಎಂದಿದ್ದಾನೆ. ನಿನ್ನೆ ಒಂದೇ ರೂಂ ನಲ್ಲಿ ಇರಬಹುದು ಇತ್ತು. ನಾನು ಏನೋ ನಿರೀಕ್ಷೆ ಮಾಡಿದ್ದೆ ಎಂದಾಗ ಯುವತಿ, ನೀವು ಹೀಗೆ ಮಾತಾನಾಡುವುದು ಸರೀ ಅಲ್ಲ. ನೀವು ವಯಸ್ಸಿನಲ್ಲಿ ನನ್ನ ತಂದೆ ಸಮಾನ ಎಂದಾಗ ತಪ್ಪಾಯಿತು ಎಂದು ಹೇಳಿದ್ದನು. ಮತ್ತೆ ಕಾರಿನಲ್ಲಿ ಸೈಟ್ ನೋಡಲು ತೆರಳಿದಾಗ, ದಾರಿ ಮಧ್ಯೆ ಕಾರು ನಿಲ್ಲಿಸಿ 1 ಲಕ್ಷ ನೋಟಿನ ಕಟ್ಟು ತೋರಿಸಿ ನನಗೆ ನೀನು ಬೇಕು, ನೀನು ನನ್ನ ಜೊತೆ ಸಹಕರಿಸಿದರೆ ಈ ಹಣ ನೀಡುತ್ತೇನೆ ಎಂದಾಗ ಯುವತಿ ವಿರೋಧಿಸಿದ್ದಾಳೆ. ಬಳಿಕವೂ ನೀನು ಸಹಕರಿಸಿದರೆ ಕುಶಾಲನಗರದಲ್ಲಿ ಇರುವ ತನ್ನ ಎರಡು ಫ್ಲಾಟ್ ಗಳನ್ನು ನಿನ್ನ ಹೆಸರಿಗೆ ಬರೆದು ಕೊಡುತ್ತೇನೆ ಎಂದು ಆಫರ್ ಮೇಲೆ ಆಫರ್ ಕೊಟ್ಟು ಯುವತಿಯ ಎದೆ, ಮೈಮೇಲೆ ಕೈ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿ ಬೊಬ್ಬೆ ಹಾಕಿ ಕಾರಿನಿಂದ ಇಳಿದು ತಪ್ಪಿಸಿಕೊಂಡಿದ್ದಾಳೆ.
ಇದೀಗ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾಗಿ ರಶೀದ್ ವಿರುದ್ಧ ದೂರು ನೀಡಿದ್ದಾರೆ. ರಶೀದ್ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದಾನೆ.
Mangalore builder booked over sexual harrasment case at pandeshwar police station. The builder has been identified as Rashid.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm