ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm