ಬ್ರೇಕಿಂಗ್ ನ್ಯೂಸ್
28-10-24 02:47 pm Bangalore Correspondent ಕ್ರೈಂ
ಬೆಂಗಳೂರು, ಅ 28: ಪತ್ನಿ ಮತ್ತು ಆಕೆಯ ಪ್ರಿಯಕರನ ಖಾಸಗಿ ವಿಡಿಯೋಗಳನ್ನ ಸಾಮಾಜಿಕ ಜಾಲತಾಣ ದಲ್ಲಿ ಬಹಿರಂಗ ಪಡಿಸುವುದಾಗಿ ಬೆದರಿಸುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ 26 ವರ್ಷದ ಮಹಿಳೆ ನೀಡಿದ ದೂರಿನ ಅನ್ವಯ ಆಕೆಯ ಪತಿ ಪ್ರಸನ್ನ ಎಂಬಾತನ ವಿರುದ್ಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಲಾಗಿದೆ.
ನಾಗಮಂಗಲ ತಾಲೂಕು ಪಾಲಗ್ರಹಾರ ನಿವಾಸಿ ಪ್ರಸನ್ನ ಹಾಗೂ ಸಂತ್ರಸ್ತೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಆರಂಭದಲ್ಲಿ ದಂಪತಿ ಲಗ್ಗೆರೆಯಲ್ಲಿ ವಾಸವಾಗಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಪತಿ ಪ್ರಸನ್ನ, ಕುಟುಂಬ ನಿರ್ವಹಣೆಗೆ ಸಹಕರಿಸದೆ ಕ್ರಿಕೆಟ್ ಬೆಟ್ಟಿಂಗ್ ಆಡುವುದು, ನನ್ನ ಮೇಲೆ ಅನುಮಾನಗೊಂಡು ಮದ್ಯ ಸೇವಿಸಿ ಹಲ್ಲೆ ಮಾಡುತ್ತಿದ್ದ. ಹೀಗಾಗಿ ಪತಿಯಿಂದ ದೂರವಾಗಿ ಬ್ಯಾಡರಹಳ್ಳಿಯಲ್ಲಿ ವಾಸವಾಗಿದ್ದೆ. ಇದೇ ವೇಳೆ ತನ್ನ ಮಾಜಿ ಪ್ರಿಯಕರ ಅಭಿಲಾಷ್ ಜತೆ ತನ್ನ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದು, ಬಳಿಕ ಇಬ್ಬರು ದೈಹಿಕ ಸಂಬಂಧ ಹೊಂದಿದ್ದೇವು. ಅದನ್ನು ನಾವು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದೆವು. ಆದರೆ, ಪತಿ ಪ್ರಸನ್ನ ಆ ವಿಡಿಯೋಗಳನ್ನು ತನ್ನ ಮೊಬೈಲ್ಗೆ ಕಳುಹಿಸಿಕೊಂಡು, ಆತನ ಮತ್ತು ನನ್ನ ಸ್ನೇಹಿತರಿಗೆ ಕಳುಹಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ. ಜತೆಗೆ ನನಗೂ ನನ್ನ ಪ್ರಿಯಕರನಿಗೂ ಪ್ರಾಣ ಬೆದರಿಕೆ ಹಾಕಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ, ನಮ್ಮ ಖಾಸಗಿ ವಿಡಿಯೋಗಳನ್ನು ಯುಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಮಹಿಳೆ ದೂರು ನೀಡಿದ್ದರು. ಆರೋಪಿಯನ್ನು ಕರೆದು ವಿಚಾರಣೆ ನಡೆಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Wife complaints against husband for blackmailing her of uploading her private videos with her boyfriend on social media.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm