ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm