ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm