ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am