ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm